ನವದೆಹಲಿ: ಭಾರತ ಕೊರೋನಾ ಸಂಕಟದಲ್ಲಿ ಒದ್ದಾಡುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ ಬಡ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಂದ ಯೋಜನೆಗಳು ಸಹಾಯಕ್ಕೆ ಬರುತ್ತಿವೆ. ಅಂತಹ ಉಪಯೋಗಕಾರಿ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನಾದ ಅಡಿಯಲ್ಲಿ ಉಜ್ವಲ ಫಲಾನುಭವಿಗಳಿಗೆ ಈವರೆಗೆ 1.51 ಕೋಟಿ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡಲಾಗಿದೆ.
ಪೆಟ್ರೋಲಿಯಂ ಆಂಡ್ ನ್ಯಾಚುರಲ್ ಗ್ಯಾಸ್ ಆಂಡ್ ಸ್ಟೀಲ್ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಕುರಿತಾದಂತೆ ನಡೆದ ವೆಬ್ನಾರ್ ಸಭೆಯಲ್ಲಿ ಭಾಗವಹಿಸಿ, ಎಲ್ಪಿಜಿಯನ್ನು ಕ್ಲಪ್ತ ಸಮಯಕ್ಕೆ ಮನೆ ಮನೆಗೆ ತಲುಪಿಸುವ ಕೆಲಸ ಮಾಡುವ ಡೆಲಿವರಿ ಬಾಯ್ಗಳ ಶ್ರಮ ಮತ್ತು ಪ್ರಾಮಾಣಿಕತೆಯನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಇಂತಹ ಕಠಿಣ ಸಂದರ್ಭದಲ್ಲಿ ಡೆಲಿವರಿ ಹುಡುಗರು ಪಿಎಂ ಕೇರ್ಸ್ಗೂ ಧನ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದೂ ಪ್ರಧಾನ್ ಅವರು ತಿಳಿಸಿದ್ದಾರೆ.
ಇಂತಹ ಕಠಿಣ ಪರಿಶ್ರಮ ಮೂಲಕ ತಮ್ಮ ಜೀವವನ್ನೂ ಲೆಕ್ಕಿಸದೆ ಪ್ರತಿನಿತ್ಯ ಸುಮಾರು 60 ಲಕ್ಷ ಉಜ್ವಲ ಯೋಜನೆಯ ಗ್ಯಾಸ್ ಸಿಲಿಂಡರ್ಗಳನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಡೆಲಿವರಿ ಬಾಯ್ಸ್ ಮಾಡುತ್ತಿದ್ದಾರೆ. ಅವರ ಈ ಸಮರ್ಪಣಾ ಭಾವ ಪ್ರಶಂಸನೀಯ ಎಂದಿರುವ ಅವರು, ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಯಾವುದೇ ಅಪಾಯ ಸಂಭವಿಸದಂತೆ ಕರ್ತವ್ಯ ನಿರ್ವಹಿಸುವಂತೆಯೂ ಕಿವಿಮಾತುಗಳನ್ನೂ ಹೇಳಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಡೆಲಿವರಿ ಬಾಯ್ಸ್ ಕೆಲಸದ ಅವಧಿಯಲ್ಲಿ ತಾವು ಅನುಭವಿಸುವ ಸಂಕಷ್ಟದ ಬಗ್ಗೆಯೂ ತಿಳಿಸಿದ್ದಾರೆ. ಅಲ್ಲದೆ ಕೊರೋನಾ ಸಂದರ್ಭದಲ್ಲಿ ಕಂಪನಿಗಳು ನಿಯಂತ್ರಣ ಸಾಧನಗಳಾದ ಅಗತ್ಯ ಪಿಪಿಇ ಗಳನ್ನು ಒದಗಿಸಿ ಕೊಟ್ಟಿರುವುದಾಗಿಯೂ ತಿಳಿಸಿದ್ದಾರೆ. ಅಲ್ಲದೆ ಸಾಮಾಜಿಕ ದೂರವನ್ನು ಕಾಪಾಡಿಕೊಂಡು ತಮ್ಮ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿರುವ ಇವರು, ಕೇಂದ್ರ ಸರ್ಕಾರದ ಆರೋಗ್ಯ ಸೇತು ಆ್ಯಪ್ ಬಳಸುವ ಮೂಲಕವೂ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.