ನವದೆಹಲಿ: ಇಡೀ ವಿಶ್ವವೇ ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುತ್ತಿದ್ದರೆ, ಪಾಕಿಸ್ತಾನ ಮಾತ್ರ ಉಗ್ರರನ್ನು ರವಾನಿಸುವಲ್ಲಿ ನಿರತವಾಗಿದೆ ಎಂದು ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಆರೋಪಿಸಿದ್ದಾರೆ.
“ನಾವು ನಮ್ಮ ನಾಗರಿಕರ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ವೈದ್ಯಕೀಯ ತಂಡಗಳನ್ನು ಕಳುಹಿಸುವ ಮೂಲಕ ಮತ್ತು ಔಷಧಿಗಳನ್ನು ರಪ್ತು ಮಾಡುವ ಮೂಲಕ ಸಹಾಯ ಮಾಡುವುದರಲ್ಲಿ ನಿರತವಾಗಿದ್ದೇವೆ. ಆದರೆ ಇನ್ನೊಂದೆಡೆ ಪಾಕಿಸ್ತಾನ ಕೇವಲ ಉಗ್ರರನ್ನು ರಫ್ತು ಮಾಡುತ್ತಿದೆ. ಇದು ನಿಜಕ್ಕೂ ಒಳ್ಳೆಯ ನಡೆಯಲ್ಲ” ಎಂದಿದ್ದಾರೆ.
“ಸಾಂಕ್ರಾಮಿಕ ರೋಗದ ವಿರುದ್ಧ ಇಡೀ ವಿಶ್ವ ಮತ್ತು ಭಾರತ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ, ನಮ್ಮ ನೆರೆಹೊರೆಯ ದೇಶ ನಮಗೆ ತೊಂದರೆಯನ್ನು ನೀಡಲು ಪ್ರಯತ್ನಿಸುತ್ತಿರುವುದು ದುರಾದೃಷ್ಟಕರ” ಎಂದಿದ್ದಾರೆ.
ವಾಸ್ತವ ಗಡಿರೇಖೆ ಪ್ರದೇಶದಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರು ಈ ಆರೋಪವನ್ನು ಮಾಡಿದ್ದಾರೆ.
ಇಂದು ಕೂಡ ಪಾಕಿಸ್ತಾನ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಗಳನ್ನು ನಡೆಸಿದೆ.
ಕಳೆದ ವಾರ ಭಾರತವು ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಿತ್ತು, ಏಪ್ರಿಲ್ 1ರಂದು 5 ಮಂದಿ ಉಗ್ರರನ್ನು ಹತ್ಯೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.