ಬೆಂಗಳೂರು: ರಾಜ್ಯದಲ್ಲಿ 5 ಪಟ್ಟು ಹೆಚ್ಚು ಕೊರೋನಾ ಟೆಸ್ಟ್ ನಡೆಸಲಾಗುವ ಮೂಲಕ ಹೆಚ್ಚಿನ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. ಅಲ್ಲದೆ ಕರ್ನಾಟಕದಲ್ಲಿ ಕೊರೋನಾದಿಂದ ಕೆಲವು ಜನರು ಪ್ರಾಣ ಕಳೆದುಕೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.
ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆ ವರೆಗೆ ರಾಜ್ಯದಲ್ಲಿ 44 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 359 ಕ್ಕೇರಿದೆ. 13 ಮಂದಿ ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಂದು ದಿನ ಕರೋನವೈರಸ್ ಅನ್ನು ಪತ್ತೆಹಚ್ಚಲು, ಪತ್ತೆಹಚ್ಚಲು ಮತ್ತು ಅಧ್ಯಯನ ಮಾಡಲು ಅತ್ಯಂತ ನಿಖರವಾದ ಟೆಸ್ಟಿಂಗ್ ವಿಧಾನಗಳಲ್ಲಿ ಒಂದಾದ 200-300 ರಿಯಲ್ ಟೈಮ್ ರಿವರ್ಸ್ ಟ್ರಾನ್ಸ್ಕ್ರಿಪ್ಷನ್ ಪಾಲಿಮರೇಸ್ ಚೈನ್ ರಿಯಾಕ್ಷನ್ (ರಿಯಲ್ ಟೈಮ್ ಆರ್ಟಿ-ಪಿಸಿಆರ್) ಪರೀಕ್ಷೆಗಳನ್ನು ರಾಜ್ಯದಲ್ಲಿ ಒಂದು ದಿನ ನಡೆಸಲು ಬಳಸಲಾಗುತ್ತಿದ್ದು, ಆ ಮೂಲಕವೂ ಸೋಂಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ದಿನವೊಂದಕ್ಕೆ ಸುಮಾರು 1500 ಜನರ ಕೊರೋನಾ ಟೆಸ್ಟ್ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಈ ವರೆಗೆ ಮೃತಪಟ್ಟವರಲ್ಲಿ ಹೆಚ್ಚಿನವರು ಸೋಂಕಿಗೆ ಆರಂಭಿಕ ಚಿಕಿತ್ಸೆ ಪಡೆದುಕೊಳ್ಳದೆ, ಉಲ್ಬಣಗೊಂಡ ಬಳಿಕ ಆಸ್ಪತ್ರೆಗೆ ದಾಖಲಾದವರಾಗಿದ್ದಾರೆ. ಈ ಸೋಂಕಿನ ಬಗ್ಗೆ ವಿವರವಾಗಿ ಚರ್ಚೆ ಮಾಡಲು ತಜ್ಞರ ಸಭೆಯನ್ನು ಕರೆಯಲಾಗಿದೆ. ಇನ್ನು ಜನ ಸಾಮಾನ್ಯರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತೀ ಮುಖ್ಯವಾಗಿದೆ. ಇನ್ನು ಮಾಹಿತಿ ತಂತ್ರಜ್ಞಾನ ಸೇರಿದಂತೆ ಮತ್ತಿತರ ಕಂಪನಿಗಳು ಪುನರಾರಂಭವಾದಾಗ ಉದ್ಯೋಗಿಗಳ ಆರೋಗ್ಯ ಪರಿಶೀಲನೆ, ಅಗತ್ಯ ಪಿಪಿಇ ಕಿಟ್ಗಳನ್ನು ನೀಡುವ ರಕ್ಷಣಾ ಕ್ರಮಗಳನ್ನು ಜಾರಿಗೊಳಿಸುವಂತೆ ಆದೇಶಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ತಿಳಿಸುವುದಾಗಿ ಸುಧಾಕರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.