ತೆಲಂಗಾಣ: ರಾಜ್ಯದಲ್ಲಿಯೂ ಕೊರೋನಾ ವೈರಸ್ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದ್ದರೂ ಸೋಂಕು ವ್ಯಾಪಿಸುತ್ತಲೇ ಇದೆ. ಇನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಸೋಂಕು ಹರಡದಂತೆ ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವಂತೆಯೂ ಕೇಂದ್ರ, ರಾಜ್ಯ ಸರ್ಕಾರಗಳು ಜನರಿಗೆ ಮನವಿ ಮಾಡುತ್ತಲೇ ಬಂದಿವೆ. ಆದರೆ ಮಾಸ್ಕ್ಗಳ ಕೊರತೆ ಇರುವುದರಿಂದ ಮತ್ತು ಸಾಮಾನ್ಯ ವರ್ಗದ ಜನರಿಗೆ ಅದನ್ನು ಕೊಳ್ಳುವ ಶಕ್ತಿ ಇಲ್ಲದೇ ಇರುವುದರಿಂದ ಹಲವಾರು ಜನರು, ಸಂಘ ಸಂಸ್ಥೆಗಳು ಹೋಂ ಮೇಡ್ ಮಾಸ್ಕ್ ಅನ್ನು ತಯಾರಿಸಿ ಜನರಿಗೆ ನೀಡುವ ಕೆಲಸವನ್ನು ಮಾಡುತ್ತಿದೆ.
ಈಗ ತೆಲಂಗಾಣ ರಾಜ್ಯಪಾಲ ತಮಿಳ್ಸಾಯಿ ಸೌಂದರ್ ರಾಜನ್ ಅವರ ಪಿಎಸ್ಒ ಅಮರರೇಶ್ವರಿ ಅವರು ಸುಮಾರು 3000 ಮಾಸ್ಕ್ಗಳನ್ನು ತಯಾರಿಸುವ ಮೂಲಕ ಜನಸೇವೆ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಮಾಸ್ಕ್ಗಳ ಕೊರತೆ ಇರುವುದನ್ನು ಮನಗಂಡು ಕೇಂದ್ರ ಸರ್ಕಾರ ಲಾಕ್ಡೌನ್ ಘೋಷಿಸಿದ ನಂತರ ಮಾಸ್ಕ್ ಹೊಲಿಯಲು ಆರಂಭಿಸಿದ ಇವರು 5000 ಮಾಸ್ಕ್ಗಳನ್ನು ತಯಾರಿಸುವ ಗುರಿಯನ್ನು ಹೊಂದಿದ್ದಾರೆ.
ತೆಲಂಗಾಣ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೊರೋನಾ ನಿಯಂತ್ರಣಕ್ಕಾಗಿ ಶ್ರಮ ಪಡುವುದನ್ನು ಕಂಡು, ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಏನಾದರೂ ಸಹಾಯವಾಗುವಂತೆ ಕೆಲಸ ಮಾಡಬೇಕಲ್ಲಾ ಎಂದು ಯೋಚಿಸಿದ ಇವರು ಮಾಸ್ಕ್ ತಯಾರಿಸಿ ಜನರಿಗೆ ತಲುಪಿಸಲಾರಂಭಿಸುತ್ತಾರೆ. ಆ ಮೂಲಕ ತೀರಾ ಅಗತ್ಯವಾದ ಮಾಸ್ಕ್ ಕೊರತೆ ನೀಗಿಸುವಲ್ಲಿ ತಮ್ಮ ಕೈಲಾದ ಸೇವೆ ಮಾಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.
ಈ ವರೆಗೆ ತೆಲಂಗಾಣದಲ್ಲಿ 698 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದ್ದು, 120 ಮಂದಿ ಚೇತರಿಸಿಕೊಂಡಿದ್ದಾರೆ. 18 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.