ನವದೆಹಲಿ: ಕೊರೋನಾ ಸೋಂಕಿನಿಂದ ದೇಶ ಕಂಗೆಟ್ಟಿದೆ. ಲಾಕ್ಡೌನ್ ಆಗಿರುವುದರಿಂದ ಜನರು ಅಗತ್ಯ ವಸ್ತುಗಳು, ಔಷಧಗಳನ್ನು ಪೂರೈಸಿಕೊಳ್ಳುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅಂಚೆ ಇಲಾಖೆಯೂ ಸರ್ಕಾರದ ಕೈ ಜೋಡಿಸಿದ್ದು, ಅಗತ್ಯ ವಸ್ತುಗಳ ಸಾಗಾಟದಲ್ಲಿ ಸಹಕರಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಅಂಚೆ ಇಲಾಖೆ ತನ್ನ ವಾಹನ ಮತ್ತು ಪೋಸ್ಟ್ ಮ್ಯಾನ್ಗಳ ಸಹಾಯದೊಂದಿಗೆ ಜನರಿಗೆ ಅಗತ್ಯವಿರುವ ವಸ್ತುಗಳನ್ನು ತಲುಪಿಸುತ್ತಿವೆ. ರಾಜ್ಯಗಳ ಒಳಗೆ ಮತ್ತು ಅಂತರ್ ರಾಜ್ಯ ಸೇವೆಗಳೆರಡನ್ನೂ ಅಂಚೆ ಇಲಾಖೆ ನೀಡುತ್ತಿದೆ. ಅಗತ್ಯ ಔಷಧ ಸಾಮಗ್ರಿಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸುತ್ತಿದೆ. ಇದುವರೆಗೆ 100 ಟನ್ ಔಷಧ ಮತ್ತು ತುರ್ತು ಅಗತ್ಯದ ವಸ್ತುಗಳನ್ನು ಸಾಗಿಸಿದೆ. ಅಲ್ಲದೆ ಪಿಂಚಣಿ ಹಣವನ್ನು ಫಲಾನುಭವಿಗಳಿಗೆ ನೀಡುವ ಕೆಲಸವನ್ನು ಮಾಡುವ ಮೂಲಕ ಇಂತಹ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಅಲ್ಲದೆ ಇಲಾಖೆ ಜಿಲ್ಲಾಡಳಿತ ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಆಹಾರ ವಸ್ತುಗಳ ಸರಬರಾಜು ಮಾಡಿದೆ. ಇನ್ನು ಮೊಬೈಲ್ ಅಂಚೆ ಕಛೇರಿಗಳು ದೇಶದಾದ್ಯಂತ ಕಾರ್ಯ ನಿರ್ವಹಿಸುತ್ತಿದ್ದು, ಅಂಚೆ ಮತ್ತು ಹಣಕಾಸು ಸೇವೆಗಳ ಜೊತೆಗೆ ಇಂತಹ ತುರ್ತು ಸಂದರ್ಭದಲ್ಲಿ ಸಮಾಜ ಸೇವಾ ಕಾರ್ಯದಲ್ಲಿಯೂ ತೊಡಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.