ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿಯಿಂದಾಗಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ನಿಯಮ ಅನುಸರಿಸಲಾಗುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ತರಲು ಚಿಂತಿಸಿದ್ದು, ಎಪ್ರಿಲ್ 20 ರ ನಂತರ ಭಾರತದಲ್ಲಿ ಕೊರೋನಾ ಹಾಟ್ಸ್ಪಾಟ್ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ ಬದಲಾವಣೆ ತಂದಿದೆ.
ಆರ್ಥಿಕ ಚಟುವಟಿಕೆಗಳಾದ ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದ್ದು, ಆ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಸಣ್ಣ ಮಟ್ಟಿಗೆ ಮೇಲೆತ್ತುವಂತೆ ಈ ವಿನಾಯಿತಿಗಳನ್ನು ಕೇಂದ್ರ ರೂಪಿಸಿಕೊಂಡಿದೆ.
ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ. ಜನ ಸಂಚಾರಕ್ಕೆ ಸಂಬಂಧಿಸಿದಂತೆ ಬೈಕ್ನಲ್ಲಿ ಒಬ್ಬರು, ಕಾರ್ನಲ್ಲಿ ಇಬ್ಬರು, ಟ್ರಕ್ನಲ್ಲಿ ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಸೇವೆಗಳಾದ ಬುದ್ಧಿಮಾಂದ್ಯರ ಕಾಳಜಿ, ಹಿರಿಯರು, ಮಕ್ಕಳ ಕಾಳಜಿ, ಅಂಗನವಾಡಿ, ಪ್ರಾವಿಡೆಂಟ್, ಪೀಂಚಣಿ ಹಂಚಿಕೆ ಮೊದಲಾದವುಗಳಿಗೂ ಕೇಂದ್ರ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.