ಮುಂಬಯಿ: ಮಹಾರಾಷ್ಟ್ರದ ಪಲ್ಘರದಲ್ಲಿ ಇಬ್ಬರು ಹಿಂದೂ ಸಾಧುಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಸಾಧುಗಳನ್ನು ಕಲ್ಪವೃಕ್ಷ ಗಿರಿ ಮತ್ತು ಶಶಿಲ್ ಗಿರಿ ಎಂದು ಗುರುತಿಸಲಾಗಿದೆ. ಇವರು ಜುನ ಅಕಾಢಕ್ಕೆ ಸೇರಿದವರಾಗಿದ್ದಾರೆ.
ಮಾತ್ರವಲ್ಲದೆ ಇಬ್ಬರು ಸಾಧುಗಳ ಜೊತೆಗಿದ್ದ ಕಾರಿನ ಚಾಲಕನನ್ನು ಕೂಡ ಗ್ರಾಮಸ್ಥರು ಬಡಿದು ಕೊಂದಿದ್ದಾರೆ.
ಇಬ್ಬರು ಸಾಧುಗಳ ಮೇಲಿನ ಅಮಾನುಷ ಹಲ್ಲೆ ಮತ್ತು ಹತ್ಯೆ ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ. ಸುಮಾರು ನೂರು ಜನರ ಗುಂಪು ದೊಣ್ಣೆಗಳಿಂದ ಇವರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಎಪ್ರಿಲ್ 14 ರಂದು ಈ ಘಟನೆ ನಡೆದಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿದ ಬಳಿಕವೇ ಘಟನೆ ಬೆಳಕಿಗೆ ಬಂದಿದೆ.
ಮುಂಬಯಿಯ ಪಲ್ಘರ್ ಗಡ್ಚಿನ್ಚಲೆ ಗ್ರಾಮದ ಜನರು ಸಾಧುಗಳ ಮೇಲೆ ಕಳ್ಳತನದ ಆರೋಪವನ್ನು ಹೊರಿಸಿ ಘಟನೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ. ಮಕ್ಕಳನ್ನು ಕಿಡ್ನಾಪ್ ಮಾಡುತ್ತಾರೆ ಮತ್ತು ಅವರ ಅಂಗಾಂಗಗಳನ್ನು ಕೀಳುತ್ತಾರೆ ಎಂದು ವದಂತಿಗಳು ಹಬ್ಬಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಸಾಧುಗಳ ಮೃತದೇಹವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುಮಾರು ನೂರು ಮಂದಿ ಗ್ರಾಮಸ್ಥರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಜಿಲ್ಲಾಧಿಕಾರಿ ಕೈಲಾಸ್ ಸಿಂಧೆ ಹೇಳಿದ್ದಾರೆ.
ವಿಡಿಯೋದಲ್ಲಿ ಸಾಧುಗಳ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ಪೊಲೀಸರ ಮುಂದೆ ಈ ಘಟನೆ ನಡೆದಿರುವುದು ವಿಪರ್ಯಾಸ. ನಾವು ಅಮಾಯಕರು ನಮ್ಮನ್ನು ಬಿಟ್ಟು ಬಿಡಿ ಎಂದು ಎಷ್ಟೇ ಅಂಗಲಾಚಿಕೊಂಡರೂ ಮಾನವೀಯತೆಯನ್ನು ತೋರದೆ ಗ್ರಾಮಸ್ಥರು ಅವರನ್ನು ಹತ್ಯೆ ಮಾಡಿದ್ದಾರೆ.
ಮೂಲಗಳ ಪ್ರಕಾರ, ಈ ಸಾಧುಗಳು ಮುಂಬಯಿಂದ ನಾಸಿಕ್ಗೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸುವ ಸಲುವಾಗಿ ಕಾರಿನಲ್ಲಿ ತೆರಳುತ್ತಿದ್ದರು. ಪಲ್ಘರ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ಇವರ ಕಾರನ್ನು ತಡೆಹಿಡಿದು ಇವರನ್ನು ಹತ್ಯೆ ಮಾಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ ಬಳಿಕ, ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ನ್ಯಾಯ ಒದಗಿಸುವ ಕುರಿತು ಭರವಸೆ ನೀಡಿದೆ.
महाराष्ट्र के पालघर में हुई इस हत्या को क्या कहें? स्टेट स्पॉन्सर्ड? या पुलिस स्पॉन्सर्ड? महाराष्ट्र सरकार की शान में आए दिन क़सीदे पढ़ने वाले फ़िल्मी सितारों में से कितनों ने इस बारे में ट्वीट किया?#Palghar_Incident #PalgharMobLynching pic.twitter.com/TNljKDpX6C
— रोहित सरदाना (@sardanarohit) April 19, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.