ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ದೇಶವ್ಯಾಪಿಯಾಗಿ ಲಾಕ್ ಡೌನ್ ಅನ್ನು ವಿಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಅತ್ಯಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಸಲುವಾಗಿ ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿ ಮಾಲೀಕರು ಪೂರೈಕಾ ಸರಪಣಿಗೆ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಣ್ಣ ವ್ಯಾಪಾರಿಗಳಿಗೆ ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಈ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶವಾಸಿಗಳು ಲಾಕ್ ಡೌನ್ ಅನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರಲ್ಲಿ ಸಮಾಜದ ಹಲವು ವರ್ಗಗಳು ಮಹತ್ವದ ಪಾತ್ರವನ್ನು ನಿಭಾಯಿಸಿವೆ. ಒಂದು ವೇಳೆ ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿ ಮಾಲೀಕರು ಅಪಾಯವನ್ನು ಮೆಟ್ಟಿನಿಂತು ಕರ್ತವ್ಯ ನಿರ್ವಹಣೆ ಮಾಡದೆ, ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡದೆ ಇರುತ್ತಿದ್ದರೆ ಏನಾಗುತ್ತಿತ್ತು ಎಂದು ಊಹಿಸಲು ಸಾಧ್ಯವೇ?” ಎಂದಿದ್ದಾರೆ.
“ಸಣ್ಣ ವ್ಯಾಪಾರಿಗಳು ಸಾಮಾಜಿಕ ವ್ಯವಸ್ಥೆಯನ್ನು ಭದ್ರವಾಗಿಸಲು ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಮಾಜ ಮತ್ತು ದೇಶದ ಅವರ ಕೊಡುಗೆಯನ್ನು ಸ್ಮರಿಸುತ್ತದೆ” ಎಂದಿದ್ದಾರೆ. ಸಾಮಾಜಿಕ ಅಂತರವನ್ನು ಪಾಲಿಸುತ್ತಾ ಮತ್ತು ಇತರರಿಗೂ ಪಾಲಿಸುವಂತೆ ಪ್ರೇರೇಪಿಸುತ್ತಾ ಕಾರ್ಯನಿರ್ವಹಿಸದ ಎಷ್ಟೊಂದು ಸವಾಲಿನ ಕೆಲಸ ಎಂಬುದು ನನಗೆ ತಿಳಿದಿದೆ ಎಂದಿದ್ದಾರೆ.
”ಭವಿಷ್ಯದಲ್ಲೂ ಕೂಡ ಅಂಗಡಿಗಳು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂಗಡಿ ಮಾಲೀಕರು ಮತ್ತು ವ್ಯಾಪಾರಿಗಳು ಅಭಿನಂದನೆಗೆ ಅರ್ಹರು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.