ಬೆಂಗಳೂರು: ಕಳೆದ ಎಪ್ರಿಲ್ 14 ರ ವರೆಗಿನ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯದ ಯಾವುದೇ ಕ್ಷೇತ್ರಕ್ಕೂ ಕೆಲಸ ನಿರ್ವಹಿಸುವ ಅವಕಾಶ ನೀಡದೇ ಇದ್ದ ಸರ್ಕಾರ ಈ ಬಾರಿ ಮಾತ್ರ ಕೆಲವು ನಿಯಮಗಳನ್ನು ಸಡಿಲಿಸಿ ಕೆಲವು ಕ್ಷೇತ್ರಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ. ಆ ಮೂಲಕ ಸಾಮಾನ್ಯ ಮತ್ತು ಬಡ ವರ್ಗದ ಜನರಿಗೆ ಕೆಲಸ ನಿರ್ವಹಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದೆ.
ಕೃಷಿ ಕೆಲಸಗಳಿಗೂ ಈ ಲಾಕ್ಡೌನ್ ಸಂದರ್ಭ ಅಗತ್ಯ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಅದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ರೈತ ಬಿತ್ತನೆ ಕೆಲಸವನ್ನು ಆರಂಭಿಸುವ ಮೂಲಕ ಬೇಸಾಯದಲ್ಲಿ ತೊಡಗಿಸಿಕೊಂಡಿದ್ದಾನೆ. ಆ ಮೂಲಕ ದೇಶಕ್ಕೆ ಬೇಕಾದ ಆಹಾರ ವಸ್ತುಗಳನ್ನು ಉತ್ಪಾದಿಸಲು ಆರಂಭಿಸಿದ್ದಾನೆ.
ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ರೈತನಿಗೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದು, ಬಿತ್ತನೆ ಬೀಜ, ರಸಗೊಬ್ಬರ, ಬೆಳೆದ ಬೆಳೆಗಳನ್ನು ಕೊಳ್ಳುವುದಕ್ಕೆ ಅವಕಾಶ, ಕೃಷಿ ಉಪಕರಣಗಳನ್ನೂ ರೈತರಿಗೆ ಸಿಗುವ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ. ಅಲ್ಲದೆ ದೂರದೂರುಗಳಲ್ಲಿದ್ದ ಜನರೂ ಕೊರೋನಾ ಭಯದಿಂದ ಹಳ್ಳಿಗಳಿಗೆ ಆಗಮಿಸಿದ್ದು, ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಇನ್ನು ಕಳೆದ ಲಾಕ್ಡೌನ್ ಸಂದರ್ಭದಲ್ಲಿ ರೈತ ಬೆಳೆದ ಉತ್ಪನ್ನಗಳನ್ನು ಕೊಳ್ಳುವವರಿಲ್ಲದೆ ಬೆಳೆ ನಷ್ಟವಾಗಿತ್ತು. ಆದರೆ ಈ ಬಾರಿ ಸರ್ಕಾರವೇ ರೈತನಿಗೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದು, ಆ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದೆ. ಈ ಬಾರಿ ಮಳೆಯೂ ರೈತನ ಕೈ ಹಿಡಿದ ಪಕ್ಷದಲ್ಲಿ ಲಾಕ್ಡೌನ್ ಮತ್ತು ಕೊರೋನಾ ನಂತರದಲ್ಲಿಯೂ ಬೇಕಾದ ಆಹಾರ ವಸ್ತುಗಳು ಲಭ್ಯವಾಗುವುದು ಸಾಧ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.