ಬೆಂಗಳೂರು : ಈ ಬಾರಿ ಜಗತ್ತನ್ನೇ ನಡುಗಿಸಿದ ಕೊರೋನಾ ಮಹಾಮಾರಿಯ ವಿರುದ್ಧ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ಆರೋಗ್ಯ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೊರೋನಾ ವಾರಿಯರ್ಸ್ಗೆ ಉಡುಗೊರೆ ನೀಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ ಸರ್ಕಾರಿ ಮೆಡಿಕಲ್ ಕಾಲೇಜುಗಳು, ಕಿದ್ವಾಯಿ ಮೊದಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕ ವೈದ್ಯಕೀಯ ಸಿಬ್ಬಂದಿಗಳಿಗೆ 7 ನೇ ವೇತನ ಆಯೋಗದನ್ವಯ ವೇತನ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಎಪ್ರಿಲ್ 1, 2020 ರಿಂದಲೇ ಅನ್ವಯವಾಗುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿರುವುದಾಗಿಯೂ ಸಭೆಯಲ್ಲಿ ತಿಳಿಸಲಾಗಿದೆ. ಆ ಮೂಲಕ ತಮ್ಮ ಜೀವವನ್ನು, ಕುಟುಂಬವನ್ನು ಲೆಕ್ಕಿಸದೆ, ಜನಸೇವೆಗೆ ನಿಂತ ಕೊರೋನಾ ವಾರಿಯರ್ಸ್ಗೆ ಕೆಲಸ ನಿರ್ವಹಿಸಲು ಮತ್ತಷ್ಟು ಹುರುಪು ತುಂಬಲಾಗುತ್ತಿದೆ ಎಂಬುದಾಗಿಯೂ ಸರ್ಕಾರ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ರಕ್ಷಕರಲ್ಲಿ ಈ ಕ್ರಮ ಮತ್ತಷ್ಟು ಹುರುಪು ತುಂಬಲಿದೆ ಎಂದಿದ್ದಾರೆ. ಅಲ್ಲದೆ ಅವರೆಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ. ಅಲ್ಲದೆ ಈ ಕ್ರಮದ ಸಂಪೂರ್ಣ ಆರ್ಥಿಕ ಹೊರೆಯನ್ನು ಸರಕಾರವೇ ಭರಿಸಲಿರುವುದಾಗಿ ಅವರು ಭರವಸೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJPರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಮೆಡಿಕಲ್ ಕಾಲೇಜುಗಳು, ಜಯದೇವ, ಕಿದ್ವಾಯಿ ಸೇರಿದಂತೆ ಎಲ್ಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಧ್ಯಾಪಕ ವೈದ್ಯರಿಗೆ 7ನೇ ವೇತನ ಆಯೋಗದನ್ವಯ, 2020ರ ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಲಾಗಿದೆ. (1/2)
— Dr Sudhakar K (@mla_sudhakar) April 20, 2020
ಇದರ ಸಂಪೂರ್ಣ ಆರ್ಥಿಕಹೊರೆಯನ್ನು ರಾಜ್ಯಸರ್ಕಾರವೇ ಭರಿಸಲಿದೆ. #COVID19 ಬಿಕ್ಕಟ್ಟಿನ ಈ ಸಂದರ್ಭದಲ್ಲಿ, ಹಗಲಿರುಳು ಸೇವೆ ಸಲ್ಲಿಸುತ್ತಿರುವ ಎಲ್ಲ ವೈದ್ಯರಿಗೆ, ಶಿಕ್ಷಕರಿಗೆ ಮತ್ತಷ್ಟು ಹುರುಪಿನಿಂದ ಸೇವೆ ಸಲ್ಲಿಸಲು ಇದು ಪ್ರೇರಣೆ ನೀಡಲಿದ್ದು, ಇಲಾಖೆಯ ಪರವಾಗಿ, ಮುಖ್ಯಮಂತ್ರಿಗಳಿಗೆೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)
— Dr Sudhakar K (@mla_sudhakar) April 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.