ನವದೆಹಲಿ : ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಕೊರೋನಾ ಸೋಂಕು ಸಮರ್ಪಕವಾಗಿ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ಆರಂಭ ಮಾಡಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಕೆಲವು ವಿಮಾನಯಾನ ಸಂಸ್ಥೆಗಳು ಸೇವೆಯನ್ನು ಆರಂಭಿಸುವುದಾಗಿ ತಿಳಿಸಿ, ಬುಕ್ಕಿಂಗ್ ಮಾಡುವುದನ್ನೂ ಆರಂಭ ಮಾಡಿದ್ದವು. ಈ ಕುರಿತಾಗಿ ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಪುರಿ ಅವರು ಯಾವುದೇ ಕಾರಣಕ್ಕೂ ವಿಮಾನಯಾನ ಆರಂಭಿಸಲಾಗುವುದಿಲ್ಲ. ದೇಶದಲ್ಲಿ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರ, ಅದರಿಂದ ಯಾವುದೇ ಅಪಾಯವಿಲ್ಲ ಎಂದು ಸರ್ಕಾರ ಭರವಸೆ ನೀಡಿದ ನಂತರವಷ್ಟೇ ವಿಮಾನಯಾನ ಆರಂಭ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಅಲ್ಲದೆ ಈಗಾಗಲೇ ಬುಕ್ಕಿಂಗ್ ಆರಂಭ ಮಾಡಿರುವ ವಿಮಾನಯಾನ ಸಂಸ್ಥೆಗಳಿಗೆ, ಬುಕ್ಕಿಂಗ್ ಸೇವೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.
I want to once again say that flight restrictions that are in place as a result of India’s fight against COVID19 will be lifted once we are confident that spread of the virus has been controlled & it poses no danger to our country & people.
— Hardeep Singh Puri (@HardeepSPuri) April 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.