ಮುಂಬೈ: ಸಹಾಯ ಮಾಡುವ ಮನೋಭಾವ ಎಲ್ಲರಲ್ಲಿಯೂ ಇರುವುದು ಸಾಧ್ಯವಿಲ್ಲ. ಕೆಲವೊಮ್ಮೆ ಕೋಟಿಗಟ್ಟಲೆ ಆಸ್ತಿ ಇದ್ದರೂ ಕೈಲಾಗದವರಿಗೆ ಸಹಾ ನೀಡುವ ಗುಣ ಮಾತ್ರ ಅವರಲ್ಲಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ತಮ್ಮಲ್ಲಿ ಇದ್ದುದರಲ್ಲಿಯೇ ಅಗತ್ಯವಿರುವವರಿಗೆ ಸಹಾಯ ಮಾಡುವ ಮೂಲಕ ಹೀಗೂ ಮಾಡುವುದು ಸಾಧ್ಯ ಎಂಬುದಕ್ಕೆ ಸಾಕ್ಷಿಗಳಾಗಿ ಬಿಡುತ್ತಾರೆ. ಅಂದ ಹಾಗೆ ಈ ಲಾಕ್ಡೌನ್ನಂತಹ ತುರ್ತು ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಘಾಟ್ಕೋಪರ್ನ ಆಟೋ ಚಾಲಕಿ ಶೀತಲ್ ಸಾರೋಡ್ ಜನರಿಗೆ ಉಚಿತ ಸೇವೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿಯೇ ಕಾರ್ಯ ನಿರ್ವಹಿಸುತ್ತಿರುವುದಾಗಿ ಸಾರೋಡ್ ತಿಳಿಸಿದ್ದೂ, ಆ ಮೂಲಕ ಅವರಿಗೆ ಕಷ್ಟದ ಸಂದರ್ಭದಲ್ಲಿ ಸಹಾಯ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಕೆಲಸವನ್ನು ತಾವು ಹಣದಾಸೆಗಾಗಿ ಮಾಡುತ್ತಿಲ್ಲ. ಬದಲಾಗಿ ಸಂಕಷ್ಟದ ಸಂದರ್ಭದಲ್ಲಿ ಸಮಾಜಕ್ಕೆ ತನ್ನಿಂದ ಕೊಂಚವಾದರೂ ಸಹಾಯವಾಗಲಿ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ತಾನು ತನ್ನ ಕುಟುಂಬಕ್ಕಾಗಿ ರಿಕ್ಷಾ ಓಡಿಸುತ್ತಿದ್ದೆ. ಅದರಿಂದ ಬಂದ ಹಣದಲ್ಲಿ ಮನೆ ನೋಡಿಕೊಳ್ಳುತ್ತಿದ್ದೆ. ಆದರೆ ಕೊರೋನಾ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಉಚಿತ ಸೇವೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಬಡ ಜನರಿಗೆ, ಆಹಾರಕ್ಕಾಗಿ ಪರದಾಡುತ್ತಿರುವವರಿಗೆ ಸಹಾಯ ಮಾಡುವ ಸಾರೋಡ್, ಅವರನ್ನು ಆಹಾರ ದೊರೆಯುವ ಪ್ರದೇಶಗಳಿಗೆ ಬಿಡುವ ಕೆಲಸವನ್ನೂ ಮಾಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.