ಬೆಂಗಳೂರು: ಕೊರೋನಾ ಕಪಿಮುಷ್ಟಿಗೆ ಸಿಲುಕಿ ನಲುಗಿರುವ ಬೆಂಗಳೂರಿಗರಿಗೆ ಸಹಾಯವಾಗುವಂತೆ ಹೊಸ ಯೋಜನೆಯೊಂದಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಮನೆಯಲ್ಲೇ ಇರಲು ಜನರಿಗೆ ಪೂರಕವಾಗುವಂತೆ ಹೋಂ ಡೆಲಿವರಿ ಹೆಲ್ಪ್ಲೈನ್ ಅನ್ನು ಆರಂಭಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಜನರು ಅಗತ್ಯ ವಸ್ತುಗಳಿಗಾಗಿ ಮನೆಯಿಂದ ಹೊರಬರದಂತೆ ತಡೆಯುವ ಉದ್ದೇಶದಿಂದ ಈ ಹೆಲ್ಪ್ಲೈನ್ ಆರಂಭಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
“080-61914960” ಸಂಖ್ಯೆಗೆ ಕರೆ ಮಾಡುವ ಮೂಲಕ ಅಗತ್ಯ ವಸ್ತುಗಳ ಪಟ್ಟಿ ನೀಡಿದರೆ, ಅವುಗಳನ್ನು ಮನೆ ಬಾಗಿಲಿಗೇ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಯಾರೂ ಮನೆಯಿಂದ ಹೊರಬರಬಾರದು ಎಂದೂ ಅವರು ಜನರಲ್ಲಿ ವಿನಂತಿಸಿದ್ದಾರೆ. ಬಿಬಿಎಂಪಿ ಮತ್ತು ಕೆಎಸ್ಡಿಎಂಎ ಸಹಯೋಗದಲ್ಲಿ ಈ ಸಹಾಯವಾಣಿ ಆರಂಭಿಸಲಾಗಿದೆ. ಬೇಕಾದ ಅಗತ್ಯ ವಸ್ತುಗಳನ್ನು ಕರೆ ಮಾಡುವ ಮೂಲಕ ಮತ್ತು ಸಂದೇಶ ಕಳುಹಿಸುವ ಮೂಲಕವೂ ತಿಳಿಸುವ ವ್ಯವಸ್ಥೆ ಇರುವುದಾಗಿಯೂ ಮಾಹಿತಿ ನೀಡಿದ್ದಾರೆ.
ಜನರು ಕೇವಲ 10 ರೂ. ಗಳನ್ನು ಪಾವತಿಸುವ ಮೂಲಕ ಆಹಾರ ವಸ್ತುಗಳು, ಔಷಧ ಮೊದಲಾದವುಗಳನ್ನು ಈ ಸಹಾಯವಾಣಿ ಮೂಲಕ ಖರೀದಿ ಮಾಡಬಹುದಾಗಿದೆ. ಹೊರಗುತ್ತಿಗೆ ಆಧಾರದಲ್ಲಿ 50 ಜನ ಅಧಿಕಾರಿಗಳ ತಂಡ ಈ ಸಹಾಯವಾಣಿಯನ್ನು ನಿರ್ವಹಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.