ನವದೆಹಲಿ : ಮುಸ್ಲಿಮರು ಎಲ್ಲಾ ಹಕ್ಕುಗಳನ್ನು ಸ್ವತಂತ್ರವಾಗಿ ಅನುಭವಿಸುತ್ತಿದ್ದು, ಸಮೃದ್ಧವಾಗಿದ್ದಾರೆ. ಭಾರತೀಯ ಮುಸ್ಲಿಮರಿಗೆ ಭಾರತ ಸ್ವರ್ಗಕ್ಕೆ ಸಮಾನ. ಇಲ್ಲಿ ಮುಸಲ್ಮಾನರ ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳಿಗೆ ಯಾವುದೇ ಚ್ಯುತಿ ಬಂದಿಲ್ಲ. ಇಂತಹ ವಾತಾವರಣದ ಸಾಮರಸ್ಯ ಕದಡುವ ಕೆಲಸ ಮಾಡುವವರು ಮುಸಲ್ಮಾನರ ಸ್ನೇಹಿತರಾಗುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆರ್ಗನೈಜೇಷನ್ ಆಫ್ ಇಸ್ಲಾಮಿಕ್ ಕಾರ್ಪೋರೇಷನ್, “ಭಾರತದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ, ಭೀತಿ ಬಿತ್ತುವ ಕೆಲಸ ನಡೆಯುತ್ತಿದೆ. ಭಾರತದಲ್ಲಿ ‘ಇಸ್ಲಾಮೋಫೋಬಿಯಾ’ ನಡೆಯುತ್ತಿದೆ. ಇವನ್ನು ತಡೆಯುವ ಮೂಲಕ ಸಮುದಾಯದ ಹಕ್ಕುಗಳನ್ನು ರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿಕೆ ನೀಡಿತ್ತು.
ಇದನ್ನು ಅಲ್ಲಗಳೆದಿರುವ ನಖ್ವಿ ಭಾರತದಲ್ಲಿ ಶಾಂತಿ ಕದಡಲು ಪ್ರಯತ್ನ ನಡೆಸುವವರು ಗೆಳೆಯರಾಗುವುದು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾತ್ಯಾತೀತತೆ ಮತ್ತು ಸಾಮರಸ್ಯ ಎಂಬುದು ಪ್ರತಿಯೊಬ್ಬ ಭಾರತೀಯನ ಉತ್ಸಾಹವಾಗಿದೆಯೇ ಹೊರತು, ರಾಜಕೀಯ ಹಿತಾಸಕ್ತಿಯಾಗಿ ಭಾರತದಲ್ಲಿ ಬಳಕೆಯಾಗುತ್ತಿಲ್ಲ. ಈ ಕುರಿತಂತೆ ನಕಲಿ ಗುಂಪುಗಳು ತಪ್ಪು, ಸುಳ್ಳು ಮಾಹಿತಿಗಳನ್ನು ನೀಡುವ ಕೆಲಸವನ್ನು ಸಕ್ರಿಯವಾಗಿ ಮಾಡುತ್ತಿವೆ. ಇಂತಹ ಪಿತೂರಿಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ ಎಂದೂ ನಖ್ವಿ ತಿಳಿಸಿದ್ದಾರೆ.
ದೇಶದ ಎಲ್ಲಾ ಜಪರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯಗಳನ್ನು ಸಮಾನ ದೃಷ್ಟಿಯಿಂದ ನೋಡುತ್ತಿದ್ದಾರೆ. ಇಂತಹ ಕಾರ್ಯಗಳು ಯಾರಿಗಾದರೂ ಅರಿವಾಗದೇ ಹೋದರೆ ಅದು ಅವರ ತಪ್ಪೇ ವಿನಃ ಭಾರತದ ಸಮಸ್ಯೆಯಲ್ಲ. ಭಾರತೀಯ ಮುಸ್ಲಿಮರು ದೇಶದಲ್ಲಿ ಉತ್ತಮ ರೀತಿಯ ಬದುಕು ಸಾಗಿಸುತ್ತಿದ್ದಾರೆ ಎಂದು ನಖ್ವಿ ತಿರುಗೇಟು ನೀಡಿದ್ದಾರೆ.
ಸರಿಯಾಗಿ ತಿಳಿದುಕೊಳ್ಳದೆ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದಂತೆಯೂ 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟಕ್ಕೆ ನಖ್ವಿ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.