ಬೆಂಗಳೂರು: ಕೊರೋನಾ ಸೋಂಕು ಹರಡುವ ತೀವ್ರತೆಯನ್ನು ಕಡಿಮೆಗೊಳಿಸುವ ಸಲುವಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ನಿಯಮವನ್ನು, ರಾಜ್ಯ ಸರ್ಕಾರ ಕೊಂಚ ಸಡಿಲಿಸಿ ಷರತ್ತು ಬದ್ಧ ಲಾಕ್ಡೌನ್ ನಿಯಮವನ್ನು ನಿನ್ನೆ ಮಧ್ಯರಾತ್ರಿಯಿಂದ ಜಾರಿಗೆ ತಂದಿದೆ. ಹಾಟ್ಸ್ಪಾಟ್ ಪ್ರದೇಶಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂದರೆ ಸೋಂಕು ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಹೊಸ ಲಾಕ್ಡೌನ್ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ, ಅಗತ್ಯ ಸೇವೆಗಳಲ್ಲಿ ಲಾಕ್ಡೌನ್ ನಿಯಮಗಳನ್ನು ಕೊಂಚ ಸಡಿಲಿಸಲಾಗಿದೆ. ಕೃಷಿ ಸಂಬಂಧಿತ ವ್ಯವಹಾರ, ಔಷಧ, ಎಪಿಎಂಸಿ ಮಾರುಕಟ್ಟೆ, ನಿರ್ಮಾಣ ಕಾಮಗಾರಿ, ರಿಯಲ್ ಎಸ್ಟೇಟ್ ವ್ಯವಹಾರ, ಮೀನುಗಾರಿಕೆ, ಮಾಂಸ ಮಾರಾಟ, ಹಾಲು ಮಾರಾಟ ಮತ್ತು ಸಾಗಾಟ, ಸರಕು ಸಾಗಾಟ ವಾಹನಗಳಿಗೆ ಅವಕಾಶ, ಹಾರ್ಡ್ವೇರ್ ಅಂಗಡಿ, ಸಿಮೆಂಟ್ ಮಾರಾಟ ಮೊದಲಾದವುಗಳಿಗೆ ಅವಕಾಶ, ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಭಾಗವಹಿಸುವ ಅವಕಾಶ ನೀಡಲಾಗಿದೆ.
ಇನ್ನು ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಆರಂಭಿಸಲಾಗಿಲ್ಲ. ಟ್ಯಾಕ್ಸಿ, ರಿಕ್ಷಾ, ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಅಂತರಾಜ್ಯ ಸಂಚಾರಕ್ಕೆ ಅವಕಾಶವಿಲ್ಲ. ಮಾಲ್, ಥಿಯೇಟರ್, ಮೆಟ್ರೋ ಸಂಚಾರ ನಿಷೇಧ. ಇವುಗಳ ಜೊತೆಗೆ ಮೇಲೆ ಸೂಚಿಸಿರುವ ನಿಯಮ ಸಡಿಲಿಸಿರುವ ಕ್ಷೇತ್ರಗಳನ್ನು ಹೊರತುಪಡಿಸಿದಂತೆ ಉಳಿದಂತೆ ಹಿಂದಿನ ಎಲ್ಲಾ ಲಾಕ್ಡೌನ್ ನಿಯಮಗಳು ಕಡ್ಡಾಯ ಜಾರಿಯಲ್ಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಅಲ್ಲದೆ ಕಂಟೈನ್ಮೆಂಟ್ ಝೋನ್ಗಳೆಂದು ಗುರುತಿಸಲ್ಪಟ್ಟ ಪ್ರದೇಶಗಳಿಗೆ ಹೊಸ ನಿಯಮ ಅನ್ವಯವಾಗುವುದಿಲ್ಲ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.