ಲಕ್ನೋ: ಉತ್ತರ ಪ್ರದೇಶದ ಕುಶಿ ನಗರದ ರಾಮ್ ಕೋಲಾ ಪ್ರದೇಶದ ಪಾಗರ್ ನಿವಾಸಿ 106 ವರ್ಷದ ನರೈನ್ ಅಲಿಯಾಸ್ ಭೂಲೆ ಬಾಯ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹಾಗೆಯೇ ನರೈನ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ಮಾಜಿ ಶಾಸಕರೂ ಆಗಿರುವ ನರೈನ್ ಅವರ ಮನೆಗೆ ಪ್ರಧಾನಿ ಕಛೇರಿಯ ಅಧಿಕಾರಿ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅವರ ಮೊಮ್ಮಗನಲ್ಲಿ ಪ್ರಧಾನಿ ಅವರು ನರೈನ್ ಅವರೊಂದಿಗೆ ಮಾತುಕತೆ ನಡೆಸಲು ಬಯಸುತ್ತಿರುವುದಾಗಿ ತಿಳಿಸಿ ಅಚ್ಚರಿ ಮೂಡಿಸಿದ್ದಾರೆ. ಅದರಂತೆ ಕರೆ ಸ್ವೀಕರಿಸಿದ ನರೈನ್ ಅವರೊಂದಿಗೆ ಮೋದಿ ಮಾತನಾಡಿದ್ದು, ನರೈನ್ ಅವರ ಆರೋಗ್ಯಕ್ಕೆ ಕುರಿತಂತೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ನೂರು ವರ್ಷಗಳು ಪೂರೈಸಿರುವ ಹಿರಿಯ ವ್ಯಕ್ತಿಯ ಆಶೀರ್ವಾದ ಪಡೆಯುವ ನಿಟ್ಟಿನಲ್ಲಿ ಮತ್ತು ಅವರ ಆರೋಗ್ಯದ ಕುರಿತಂತೆ ಮಾಹಿತಿ ಸಂಗ್ರಹಿಸುವುದಕ್ಕಾಗಿ ಕರೆ ಮಾಡಿರುವುದಾಗಿ ತಿಳಿಸಿದ್ದಾರೆ.
ಇನ್ನು ನರೈನ್ ಅವರು ಈ ಹಿಂದೆ ಉತ್ತರ ಪ್ರದೇಶದ ನೌರಂಗಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಜನ ಸಂಘದ ಸಂಸ್ಥಾಪಕ ಡಾ. ದೀನ ದಯಾಳ್ ಉಪಾಧ್ಯಾಯ ಅವರ ಆಪ್ತರ ಸಾಲಿನಲ್ಲಿಯೂ ಗುರುತಿಸಿಕೊಂಡಿದ್ದರು. ಅಲ್ಲದೆ ಶ್ಯಾಮ್ ಪ್ರಸಾದ್ ಮುಖರ್ಜಿ, ವಾಜಪೇಯಿ ಮತ್ತು ಅಡ್ವಾಣಿ ಅವರೊಂದಿಗೂ ನಿಕಟ ಸಂಪರ್ಕ ಹೊಂದಿದ್ದರು.
ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗಕ್ಕೂ ಶುಭಾಶಯ ಸಲ್ಲಿಸಿದ ಅವರು, 106 ವರ್ಷದ ನರೈನ್ ಅವರನ್ನು ಚೆನ್ನಾಗಿ ನೋಡಿಕೊಳ್ಳುವಂತೆಯೂ ತಿಳಿಸಿದ್ದಾರೆ. ಸುಮಾರು ಎರಡೂವರೆ ನಿಮಿಷ ಇವರಿಬ್ಬರೂ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ನರೈನ್ ಪ್ರಧಾನಿಯವರೊಂದಿಗೆ ಮಾತನಾಡಿರುವುದು ಸಂತೋಷ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪ್ರಧಾನಿ ಅವರನ್ನು ತಾವು ಈ ಹಿಂದೆ ನಾಗ್ಪುರದ ಆರೆಸ್ಸೆಸ್ ಕಛೇರಿ, ಕುಶಿ ನಗರದ ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿಯೂ ಭೇಟಿಯಾಗಿರುವುದಾಗಿ ತಿಳಿಸಿದ ಅವರು, ಮೋದಿ ಅವರ ಕಾಳಜಿಗೆ ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.