ಮುಂಬಯಿ: ದೇಶದ ಖ್ಯಾತ ಪತ್ರಕರ್ತ ಅರ್ಣಬ್ ಗೋಸ್ವಾಮಿ ಮತ್ತು ಅವರ ಪತ್ನಿ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಇಬ್ಬರು ದುಷ್ಕರ್ಮಿಗಳನ್ನು ಮಹಾರಾಷ್ಟ್ರ ಪೊಲೀಸರು ಇಂದು ಬಂಧನಕ್ಕೊಳ ಪಡಿಸಿದ್ದಾರೆ.
“ಅರ್ಣಬ್ ಗೋಸ್ವಾಮಿ ಮತ್ತು ಅವರ ಪತ್ನಿಯ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ” ಎಂದು ಮುಂಬೈ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಎನ್ ಎಮ್ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಸೆಕ್ಷನ್ 341 ಮತ್ತು 504 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ರಿಪಬ್ಲಿಕ್ ಟಿವಿ ಮುಖ್ಯಸ್ಥರಾಗಿರುವ ಅರ್ಣಬ್ ಗೋಸ್ವಾಮಿ ಮತ್ತು ಅವರ ಪತ್ನಿ ತಮ್ಮ ಸ್ಟುಡಿಯೋದಿಂದ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಾರಿನ ಮೇಲೆ ಕೆಲವೊಂದು ವಸ್ತುಗಳನ್ನು ಅವರು ಎಸೆದಿದ್ದಾರೆ, ಅರ್ಣಬ್ ಅವರ ಭದ್ರತಾ ಸಿಬ್ಬಂದಿ ಅವರನ್ನು ಹಿಮ್ಮೆಟ್ಟಿಸಿದರು ಎಂದು ಹೇಳಲಾಗಿದೆ.
ಕಾಂಗ್ರೆಸ್ ಪಕ್ಷವೇ ದಾಳಿಕೋರರನ್ನು ಕಳುಹಿಸಿದ್ದು ಎಂದು ರಿಪಬ್ಲಿಕ್ ವರದಿ ಹೇಳಿದೆ. ಆರೋಪಿಗಳು ಇದನ್ನು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ಅದು ಹೇಳಿದೆ.
ಮಹಾರಾಷ್ಟ್ರದಲ್ಲಿ ಇಬ್ಬರು ಸಾಧುಗಳ ಮೇಲಿನ ಗುಂಪು ಹಲ್ಲೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿಯವರ ಮೌನವನ್ನು ಪ್ರಶ್ನಿಸಿ ಅರ್ಣಬ್ ಗೋಸ್ವಾಮಿ ಅವರು ತಮ್ಮ ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದರು. ಇದರ ವಿರುದ್ಧ ಕಾಂಗ್ರೆಸ್ಸಿಗರು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟದ ಅರ್ಣಬ್ ವಿರೋಧಿ ಅಭಿಯಾನವನ್ನು ಆರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.