ಶೃಂಗೇರಿ : ಮಹಾರಾಷ್ಟ್ರದ ಪಲ್ಘರ ಗ್ರಾಮದಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರಿನ ಚಾಲಕನನ್ನು ಸ್ಥಳೀಯರು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದೇಶದ ಮೂಲೆ ಮೂಲೆಯಿಂದಲೂ ಈ ಕೃತ್ಯಕ್ಕೆ ಖಂಡನೆಗಳು ವ್ಯಕ್ತವಾಗುತ್ತಿವೆ.
ಶೃಂಗೇರಿ ಶಾರದಾಪೀಠ ಮಹಾರಾಷ್ಟ್ರದಲ್ಲಿ ನಡೆದ ಸಾಧುಗಳ ಹತ್ಯೆಯನ್ನು ಖಂಡಿಸಿದೆ.
“ಪಲ್ಘರದಲ್ಲಿ ಏಪ್ರಿಲ್ 16 ರಂದು ನಡೆದ ಸಾಧುಗಳ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಹತ್ಯೆಯಾದ ಸಾಧು ಶ್ರೀ ಕಲ್ಪವೃಕ್ಷ ಗಿರಿ ಜೀ ಹಾಗೂ ಸಾಧು ಶ್ರೀ ಸುಶೀಲ್ ಗಿರಿ ಜೀ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ನಾವು ಶಾರದಾದೇವಿಯಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದೇವೆ. ಅಲ್ಲದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶೃಂಗೇರಿಮಠವು ದೇಶದ ಸಮಸ್ತ ನಾಗರಿಕರಲ್ಲಿ ಶಾಂತಿ ಕಾಪಾಡಲು ಮನವಿ ಮಾಡುತ್ತದೆ, ಪೂರ್ತಿ ಮಾನವಕುಲದ ಯೋಗಕ್ಷೇಮಕ್ಕಾಗಿ ಮಠದಲ್ಲಿ ಪ್ರತಿನಿತ್ಯ ಪ್ರಾರ್ಥನೆ ನಡೆಸಲಾಗುತ್ತಿದೆ” ಎಂದು ಶ್ರೀ ಶಾರದಾ ಪೀಠ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
— Sringeri Math (@sringerimath) April 23, 2020
ಮಕ್ಕಳ ಕಳ್ಳರು ಎಂದು ಸಾಧುಗಳ ಮೇಲೆ ಸುಳ್ಳು ಆರೋಪವನ್ನು ಹೊರಿಸಿ, ಅವರ ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ ಎಂಬುದು ಇನ್ನೊಂದು ಆಘಾತಕಾರಿ ವಿಷಯ. ಮಹಾರಾಷ್ಟ್ರ ಸರಕಾರದ ವೈಫಲ್ಯವನ್ನು ಈ ಘಟನೆ ಸಾರಿ ಹೇಳುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.