ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಬಿಕ್ಕಟ್ಟನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ ಎಂದು ದೇಶದ ಶೇಕಡ 93.5 ರಷ್ಟು ಜನರು ಭರವಸೆ ವ್ಯಕ್ತಪಡಿಸಿದ್ದಾರೆ.
ಐಎಎನ್ಎಸ್-ಸಿ- ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಶೇ.93.5ರಷ್ಟು ಜನರು ಮೋದಿ ಸರ್ಕಾರದ ಮೇಲೆ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮೊದಲ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಶೇ.76.8ರಷ್ಟು ಮಂದಿ ಮೋದಿ ಸರಕಾರದ ಮೇಲೆ ಭರವಸೆಯನ್ನು ವ್ಯಕ್ತಪಡಿಸಿದ್ದರು. ಏಪ್ರಿಲ್ 21 ರಂದು ಹೊರಬಂದ ಸಮೀಕ್ಷೆಯಲ್ಲಿ ಈ ಪ್ರಮಾಣ ಶೇ. 93.5 ಕ್ಕೆ ಏರಿಕೆಯಾಗಿದೆ.
ಎಪ್ರಿಲ್ 16 ರ ಸಂದರ್ಭದಲ್ಲಿ ಶೇ.75.8ರಷ್ಟು ಮಂದಿ ಮೋದಿ ಸರಕಾರದ ಮೇಲೆ ಭರವಸೆಯನ್ನು ವ್ಯಕ್ತಪಡಿಸಿದ್ದರು. ಬಳಿಕ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದ ನಂತರ ನಂಬಿಕೆ ವ್ಯಕ್ತಪಡಿಸುವವರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದೆ.
ಏಪ್ರಿಲ್ ಒಂದರ ಬಳಿಕ ಮೋದಿ ಸರ್ಕಾರದ ಮೇಲೆ ಜನರ ಭರವಸೆ ಹೆಚ್ಚಾಗಿದೆ. ಮಾರ್ಚ್ 31ಕ್ಕೆ ಹೋಲಿಸಿದರೆ ಸರ್ಕಾರದ ಮೇಲೆ ನಂಬಿಕೆ ಇಟ್ಟವರು ಸಂಖ್ಯೆ ಈಗ ಹೆಚ್ಚಾಗಿದೆ. ಮಾರ್ಚ್ 31ಕ್ಕೆ ಶೇ.79.4ರಷ್ಟು ಮಂದಿ ಸರ್ಕಾರದ ಮೇಲೆ ಭರವಸೆ ಇಟ್ಟರೆ, ಏಪ್ರಿಲ್ 1 ರಂದು ಶೇ. 89.9 ರಷ್ಟು ಮಂದಿ ಮೋದಿ ಸರ್ಕಾರದ ಮೇಲೆ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.