ಬೆಂಗಳೂರು : ಕೊರೋನಾ ಲಾಕ್ಡೌನ್ನಿಂದಾಗಿ ಅಗತ್ಯ ವಸ್ತುಗಳನ್ನು ಕೊಳ್ಳುವುದಕ್ಕೂ ಜನಸಾಮಾನ್ಯರು ಪರದಾಡಬೇಕಾಗಿದೆ. ಈ ತೊಂದರೆ ತಪ್ಪಿಸುವ ಸಲುವಾಗಿ, ಮತ್ತು ವಸ್ತುಗಳನ್ನು ಕೊಂಡುಕೊಳ್ಳುವ ನೆಪದಲ್ಲಿ ಜನರು ಗುಂಪು ಸೇರದಂತೆ, ಆ ಮೂಲಕ ಕೊರೋನಾ ಹರಡಲು ಅನುವು ಮಾಡಿಕೊಡದಂತೆ ತಡೆಯಲು ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ಗಳನ್ನು ದಿನದ 24 ಗಂಟೆಯೂ ತೆರೆದಿರುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಲು ಉಚ್ಛ ನ್ಯಾಯಾಲಯ ನಿರಾಕರಿಸಿದೆ.
ಈ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲೆ ಸಂಧ್ಯಾ ವಿ. ಪ್ರಭು ಅವರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಒಕ ಮತ್ತು ನ್ಯಾಯಮೂರ್ತಿ ಬಿ. ವಿ. ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ, ಇದು ಸರ್ಕಾರದ ನಿರ್ಣಯವಾಗಿದೆ. ದಿನದ 24 ಗಂಟೆಯೂ ದಿನಸಿ ಅಂಗಡಿ, ಸುಪರ್ ಮಾರ್ಕೆಟ್ ತೆರೆಯಲು ನೀಡಿರುವ ಆದೇಶದಲ್ಲಿ ಯಾವುದೇ ರೀತಿಯ ಕಾನೂನಿನ ಸಮಸ್ಯೆಗಳಿರುವುದು ಕಂಡು ಬರುವುದಿಲ್ಲ ಎಂದು ತಿಳಿಸಿದೆ.
ಜೊತೆಗೆ ಪ್ರಸ್ತುತ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಅಗತ್ಯ ವಸ್ತುಗಳನ್ನು ಜನರಿಗೆ ತಲುಪಿಸಬೇಕಾದ ತುರ್ತಿನಲ್ಲಿದೆ. ಆಹಾರ ವಸ್ತುಗಳ ಸರಬರಾಜು, ಮಾರುಕಟ್ಟೆಗಳನ್ನು ತೆರೆಯುವ ನಿಟ್ಟಿನಲ್ಲಿ ಸರ್ಕಾರ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸುವ ಮೂಲಕ ಯಾವುದೇ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬುದಾಗಿಯೂ ಕೋರ್ಟ್ ಹೇಳಿದೆ. ಅಲ್ಲದೆ ಈ ವಿಚಾರದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಅಗತ್ಯವಿಲ್ಲ ಎಂದೂ ಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.