ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಾಳ್ಮೆ, ಸಹಕಾರ, ಜಾಗ್ರತೆಯ ಮೂಲಕ ಸೋಲಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಚಾಯತ್ ರಾಜ್ ವ್ಯವಸ್ಥೆಯನ್ನು ಕೋವಿಡ್-19 ವಿರುದ್ಧದ ಧೈರ್ಯಶಾಲಿ ಯೋಧರು ಎಂದು ಬಣ್ಣಿಸಿದ ಮೋದಿ, ವೈರಸ್ ಅನ್ನು ಸೋಲಿಸಲು ತಾಳ್ಮೆ, ಸಹಕಾರ, ಶಿಸ್ತು, ಎಚ್ಚರಿಕೆ ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ದೇಶದಾದ್ಯಂತ ಇರುವ ಪಂಚಾಯತ್ ರಾಜ್ ಸದಸ್ಯರು ವಹಿಸುತ್ತಿರುವ ಪಾತ್ರದ ಬಗ್ಗೆ ಅವರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ದೇಶವು ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಸ್ತುತ ಅನಿಶ್ಚಿತತೆಯ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಮೋದಿ ಹೇಳಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಸರ್ವ ಸದಸ್ಯರು ಕೂಡ ಸ್ಪೂರ್ತಿಯ ಸೆಲೆಯಾಗಿದ್ದು, ಧೈರ್ಯಶಾಲಿ ಯೋಧರಂತೆ ಸಂಪೂರ್ಣ ಸಮರ್ಪಣೆಯೊಂದಿಗೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಸಮಗ್ರತೆ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತದ ಶಕ್ತಿಯಾಗಿದೆ ಎಂದಿರುವ ಮೋದಿ, “ತಾಳ್ಮೆ, ಸಹಕಾರ, ಶಿಸ್ತು ಮತ್ತು ಜಾಗ್ರತೆಯ ಮೂಲಕ ವೈರಸ್ ಅನ್ನು ಸೋಲಿಸಬಹುದು” ಎಂದಿದ್ದಾರೆ.
“ಗ್ರಾಮೀಣ ಭಾರತದ ಆಶೋತ್ತರಗಳನ್ನು ಪೂರೈಸಲು ಪಂಚಾಯತ್ ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ, ಭಾರತದ ಅಭಿವೃದ್ಧಿಯಲ್ಲಿ ಕೀಲಿಕೈ ಆಗಿರುವ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದಿದ್ದಾರೆ.
“ಗ್ರಾಮಗಳ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ತರಲಾಗಿದೆ. ಸರ್ಕಾರವು ಗ್ರಾಮಗಳಿಗೆ ವಿದ್ಯುತ್ ಅನ್ನು ಒದಗಿಸುವ ಕಾರ್ಯ ಮಾಡಿದೆ, ಗ್ರಾಮಗಳಿಗೆ ಡಿಜಿಟಲ್ ಸಂಪರ್ಕ ನೀಡಲಾಗುತ್ತಿದೆ, ಉಜ್ವಲ ಯೋಜನೆ ಒದಗಿಸಲಾಗಿದೆ. ಇಂದು ಗ್ರಾಮಗಳು ಸುಸ್ಥಿರ ಮತ್ತು ವೇಗದ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.