ನವದೆಹಲಿ: ಭಾರತದಲ್ಲಿ ಲಾಕ್ ಡೌನ್ ಅನ್ನು ವಿಧಿಸಿದ ನಿರ್ಧಾರ ಸಮಯೋಚಿತವಾಗಿದೆ ಮತ್ತು ಕೊರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಶುಕ್ರವಾರ ಆರೋಗ್ಯ ಸಚಿವಾಲಯ ಹೇಳಿದೆ.
ರಾಜ್ಯ ಸರಕಾರಗಳು ಸಾಂಕ್ರಾಮಿಕ ರೋಗ ಹೆಚ್ಚಿರುವ ಅಥವಾ ಸೋಂಕಿನ ಸಂಖ್ಯೆ ಅತಿ ವೇಗದಲ್ಲಿ ದ್ವಿಗುಣಗೊಳ್ಳುತ್ತಿರುವ ಜಿಲ್ಲೆಗಳತ್ತ ಹೆಚ್ಚಿನ ಗಮನವನ್ನು ನೀಡಬೇಕಾಗಿದೆ ಎಂದು ಸಚಿವಾಲಯ ಹೇಳಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವಾಲಯದ ವಕ್ತಾರರು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,684 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ 23,077ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 491 ರೋಗಿಗಳು ಗುಣಮುಖರಾಗಿದ್ದಾರೆ. ಈ ಮೂಲಕ ಗುಣಮುಖರಾದರು ಸಂಖ್ಯೆ 4, 700 ಗಡಿಯನ್ನು ದಾಟಿದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ರೋಗವು ದ್ವಿಗುಣಗೊಳ್ಳುವ ದರ ಪ್ರಸ್ತುತ 9 ದಿನಗಳಾಗಿವೆ, ಕಳೆದ ಹದಿನಾಲ್ಕು ದಿನಗಳಿಂದ ದೇಶದ 80 ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.