ನವದೆಹಲಿ: ಭಾರತದ ಮೇಲೆ ದಾಳಿಯನ್ನು ನಡೆಸಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಪ್ರಯೋಗಿಸಲು ಮುಂದಾಗುತ್ತಿದೆ ಪಾಕಿಸ್ತಾನ. ಇಡೀ ಜಗತ್ತು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮಗ್ನವಾಗಿದ್ದರೆ, ಪಾಕಿಸ್ತಾನ ಮಾತ್ರ ಭಾರತದ ಮೇಲೆ ದಾಳಿಯನ್ನು ನಡೆಸುವ ಬಗ್ಗೆ ಯೋಚಿಸುತ್ತಿದೆ.
ಪಾಕಿಸ್ತಾನ ಮೂಲದ ಭೂಗತ ಜಗತ್ತು ಮತ್ತು ಸ್ಮಗ್ಲಿಂಗ್ ಗ್ರೂಪ್ಗಳನ್ನು ಬಳಸಿಕೊಂಡು ಸಮುದ್ರಮಾರ್ಗವಾಗಿ ಭಾರತದ ಮೇಲೆ ದಾಳಿ ನಡೆಸಲು ಪ್ರಸ್ತುತ ಪಾಕಿಸ್ತಾನವು ಯೋಜನೆಯನ್ನು ರೂಪಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆಯು ನೀಡಿದೆ.
ಪಾಕಿಸ್ತಾನದ ನಟೋರಿಯಸ್ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ಪಶ್ಚಿಮ ಕರಾವಳಿ ಅಥವಾ ಭಾರತದ ಸಮುದ್ರ ಪ್ರದೇಶದ ಮೌಲ್ಯಯುತ ಆಸ್ತಿಗಳ ಮೇಲೆ ದಾಳಿ ನಡೆಸುವ ಹುನ್ನಾರವನ್ನು ನಡೆಸುತ್ತಿದೆ. ಇದಕ್ಕಾಗಿ ಅದು ಭೂಗತ ಜಗತ್ತು ಮತ್ತು ಸ್ಮಗ್ಲಿಂಗ್ ಗ್ರೂಪ್ಗಳನ್ನು ಬಳಸಿಕೊಳ್ಳಲು ಮುಂದಾಗುತ್ತಿದೆ ಎಂದು ಹೇಳಲಾಗಿದೆ.
ಇಡೀ ಜಗತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುತ್ತಿದ್ದರೆ, ಪಾಕಿಸ್ತಾನ ಮಾತ್ರ ಈ ಸಂದರ್ಭದಲ್ಲೂ ಭಾರತದ ಮೇಲೆ ದಾಳಿಗಳನ್ನು ನಡೆಸುವ ತನ್ನ ಕುತಂತ್ರವನ್ನು ಬಿಡುತ್ತಿಲ್ಲ. ಗಡಿ ಪ್ರದೇಶದಲ್ಲಿ ನಿರಂತರವಾಗಿ ಕದನವಿರಾಮ ಉಲ್ಲಂಘನೆಗಳನ್ನು ಮಾಡುತ್ತಲೇ ಇದೆ. ಭಾರತದೊಳಗೆ ಭಯೋತ್ಪಾದಕರನ್ನು ನುಗ್ಗಿಸುವ ತಂತ್ರಗಾರಿಕೆಯನ್ನು ಮಾಡಿದೆ.
ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು, ಪಾಕಿಸ್ತಾನವು ಭಾರತದೊಳಗೆ ಕರೋನಾವೈರಸ್ ರೋಗಿಗಳನ್ನು ನುಗ್ಗಿಸಲು ಪ್ರಯತ್ನಿಸುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.