ಮುಂಬೈ: ದೇಶದಲ್ಲಿ ಕೊರೋನಾ ತಾಂಡವವಾಡುತ್ತಿದೆ. ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳು ಅಧಿಸೂಚನೆ ಹೊರಡಿಸಿದ್ದು, ದೇಶವನ್ನು ಲಾಕ್ಡೌನ್ ಮಾಡಲಾಗಿದೆ. ಇಃತಹ ಸಂದರ್ಭದಲ್ಲಿ ತನ್ನ ಇ-ರಿಕ್ಷಾದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ 4 ಜನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಂಪಾರ್ಟ್ಮೆಂಟ್ ನಿರ್ಮಿಸುವ ಮೂಲಕ ಈಗ ರಿಕ್ಷಾ ಚಾಲಕನೊಬ್ಬ ಸುದ್ದಿಯಾಗಿದ್ದಾನೆ. ತನ್ನ ವಿಭಿನ್ನ ಪ್ರಯತ್ನದ ಮೂಲಕವೇ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ ಮಹೀಂದ್ರಾ ಅವರ ಮೆಚ್ಚುಗೆಗೂ ಪಾತ್ರವಾಗಿದ್ದಾನೆ.
ಈ ಯುವಕನ ವಿಭಿನ್ನ ಪ್ರಯತ್ನದ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ, ಪರಿಸ್ಥಿತಿಗೆ ಅನುಗುಣವಾಗಿ ಭಾರತೀಯರು ಹೊಸ ಹೊಸ ಅನ್ವೇಷಣೆಗಳನ್ನು, ಐಡಿಯಾಗಳನ್ನು ಕಂಡು ಹಿಡಿಯುತ್ತಲೇ ಇರುತ್ತಾರೆ. ಹೊಸ ಅವಿಷ್ಕಾರಗಳನ್ನು ಸಂದರ್ಭಕ್ಕೆ ತಕ್ಕಂತೆ ಮಾಡುತ್ತಲೇ ಇರುತ್ತಾರೆ. ಈತನ ವಿನೂತನ ಉಪಾಯವೇ ಇದಕ್ಕೆ ಸಾಕ್ಷಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಆತನನ್ನು ಆತ ಯಾರೆಂದು ತಿಳಿದುಕೊಳ್ಳುವಂತೆಯೂ ಹೇಳಿರುವ ಆನಂದ್, ಈ ಅಟೋ ಚಾಲಕನನ್ನು ತಮ್ಮ ಕಂಪನಿಯ ಗ್ರಾಮೀಣ ಅಭಿವೃದ್ಧಿ ವಿಭಾಗದ ಸಲಹೆಗಾರನಾಗಿ ನೇಮಿಸುವಂತೆ ಕಂಪನಿಯ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.
The capabilities of our people to rapidly innovate & adapt to new circumstances never ceases to amaze me. @rajesh664 we need to get him as an advisor to our R&D & product development teams! pic.twitter.com/ssFZUyvMr9
— anand mahindra (@anandmahindra) April 24, 2020
ಹೊಸ ಹೊಸ ಅನ್ವೇಷಣೆಗಳ ಮೂಲಕ ಆಗಾಗೆ ಇಂತಹ ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರುತ್ತಲೇ ಇರುತ್ತಾರೆ. ಇದೀಗ ಈ ಅಟೋ ಚಾಲಕ ಮಹೀಂದ್ರಾ ಕಣ್ಣಿಗೆ ಬಿದ್ದಿದ್ದು, ಆತನ ಅದೃಷ್ಟ ಖುಲಾಯಿಸಿದೆ ಎಂದೇ ಹೇಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.