ನವದೆಹಲಿ: ಗಲ್ಫ್ ರಾಷ್ಟ್ರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತ ವಿರೋಧಿ ಟ್ವಿಟರ್ ಹ್ಯಾಂಡಲ್ಗಳ ಸಂಖ್ಯೆಯಲ್ಲಿ ಧಿಡೀರ್ ಏರಿಕೆಯಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ರಂಜಾನ್ ಆರಂಭದ ಹಿನ್ನೆಲೆಯಲ್ಲಿ ಶುಭಕೋರಲು ಹಲವು ಪಶ್ಚಿಮ ಏಷ್ಯಾ ರಾಷ್ಟ್ರಗಳಿಗೆ ದೂರವಾಣಿ ಕರೆ ಮಾಡಿದ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಜೈಶಂಕರ್ ಅವರು, ಎಪ್ರಿಲ್ 23ರಂದು ಸೌದಿ ಅರೇಬಿಯ ಮತ್ತು ಓಮನ್ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಏಪ್ರಿಲ್ 24ರಂದು ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಪ್ಯಾಲೆಸ್ತೀನ್ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಹರೈನ್, ಕುವೈಟ್ ಮತ್ತು ಅಲ್ಜೀರಿಯಾ ಸಚಿವರೊಂದಿಗೂ ಈ ವಿಷಯವನ್ನು ಅವರು ಪ್ರಸ್ತಾಪ ಮಾಡಿದ್ದಾರೆ.
ಇತ್ತೀಚಿಗೆ @pak_fauj ಎಂಬ ಟ್ವಿಟರ್ ಹ್ಯಾಂಡಲ್ ಒಂದು ತನ್ನ ಹೆಸರನ್ನು ಒಮಾನಿ ರಾಯಲ್ಟಿ ಎಂದು ಬದಲಾಯಿಸಿಕೊಂಡು ಭಾರತ ವಿರೋಧಿ ವಿಷಯಗಳನ್ನು ಬಿತ್ತರ ಮಾಡುತ್ತಿತ್ತು. ಬಳಿಕ ಈ ಬಗ್ಗೆ ಒಮಾನಿ ರಾಜಕುಮಾರಿಯು ಹೇಳಿಕೆಯನ್ನು ಬಿಡುಗಡೆ ಮಾಡಿ, ಯಾರೋ ತನ್ನ ಹೆಸರಿನಲ್ಲಿ ನಕಲಿ ಟ್ವೀಟ್ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ಗಲ್ಫ್ ನಾಯಕರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ, ಭಾರತ ಮತ್ತು ಗಲ್ಫ್ ರಾಷ್ಟ್ರಗಳ ನಡುವೆ ಇರುವ ವಿಶೇಷ ಸಂಬಂಧವನ್ನು ಅಸ್ಥಿರಗೊಳಿಸುವ ಹುನ್ನಾರವನ್ನು ನಡೆಸುವ ಉದ್ದೇಶ ಇದು ಉಭಯ ದೇಶಗಳು ಕಂಡುಕೊಂಡಿವೆ.
ಗಲ್ಫ್ ಕಾರ್ಪೊರೇಷನ್ ಕೌನ್ಸಿಲ್ ವಿದೇಶಾಂಗ ಸಚಿವರು ದೇಶದಲ್ಲಿ ವಾಸಿಸುತ್ತಿರುವ ಮತ್ತು ಕಾರ್ಯನಿರ್ವಹಿಸುತ್ತಿರುವ ಭಾರತೀಯರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ.
ಇನ್ನೊಂದೆಡೆ ಕರೋನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಭಾರತವು ಹಲವು ಗಲ್ಫ್ ದೇಶಗಳಿಗೆ ಔಷಧಿಗಳನ್ನು ಪೂರೈಕೆ ಮಾಡುತ್ತಿದೆ.
ಹೈಡ್ರಾಕ್ಸಿಕ್ಲೋರುಕ್ವಿನ್ ಅನ್ನು ಸೌದಿ ಅರೇಬಿಯಾ, ಬಹರೇನ್, ಓಮನ್, ಕತಾರ್, ಈಜಿಪ್ಟ್ ಮತ್ತು ಪ್ಯಾಲೇಸ್ತೀನ್ಗೆ ಕಳುಹಿಸಿಕೊಟ್ಟಿದೆ.
ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಹಲವು ರಾಷ್ಟ್ರಗಳೊಂದಿಗೆ ಪ್ರಧಾನಮಂತ್ರಿ ದೂರವಾಣಿ ಮೂಲಕ ಮಾತುಕತೆಯನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.