ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಹನ ನಡೆಸಿದರು.
ಈ ವಿಡಿಯೋಕಾನ್ಫರೆನ್ಸ್ ಸಭೆಯಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಹಿಮಾಚಲ ಪ್ರದೇಶದ ಸಿಎಂ ಜೈ ರಾಮ್ ಠಾಕೂರ್, ಗುಜರಾತ್ ಸಿಎಂ ವಿಜಯ್ ರೂಪಾನಿ, ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ, ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್, ತಮಿಳುನಾಡು ಸಿಎಂ ಇ ಕೆ ಪಳನಿಸ್ವಾಮಿ, ತ್ರಿಪುರ ಸಿಎಂ ಬಿಪ್ಲಾಬ್ ಕುಮಾರ್ ದೇಬ್, ಮೇಘಾಲಯ ಸಿಎಂ ಕಾನ್ರಾಡ್ ಕೆ ಸಂಗ್ಮಾ ಇತರರು ಭಾಗವಹಿಸಿದ್ದರು.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ ಮುರ್ಮು ಮತ್ತು ಲಡಾಖ್ ಲೆ.ಗವರ್ನರ್ ಮಾಥುರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಆದರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಭೆಯಲ್ಲಿ ಭಾಗವಹಿಸಿಲ್ಲ. ಅವರ ಮುಖ್ಯ ಕಾರ್ಯದರ್ಶಿ ಟಾಮ್ ಜೋಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಮೂಲಗಳ ಪ್ರಕಾರ, ಕೇರಳ ತನ್ನ ಸಲಹೆಗಳನ್ನು ಲಿಖಿತವಾಗಿ ನೀಡಿದೆ.
ಈ ಸಂದರ್ಭದಲ್ಲಿ ಮೋದಿ, “ಲಾಕ್ ಡೌನ್ ಸಕಾರಾತ್ಮಕ ಫಲಿತಾಂಶಗಳನ್ನು ನೀಡಿದೆ. ಕಳೆದ ಒಂದೂವರೆ ತಿಂಗಳಲ್ಲಿ ಭಾರತ ಸಾವಿರಾರು ಜೀವಗಳನ್ನು ಉಳಿಸಿದೆ” ಎಂದಿದ್ದಾರೆ.
ಹಾಟ್ಸ್ಪಾಟ್ ಏರಿಯಾಗಳಲ್ಲಿ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಅವರು ಮುಖ್ಯಮಂತ್ರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ರೆಡ್ ಝೋನ್ಗಳನ್ನು ಆರೇಂಜ್ ಝೋನ್ ಆಗಿ, ನಂತರ ಗ್ರೀನ್ ಝೋನ್ ಆಗಿ ಪರಿವರ್ತಿಸುವತ್ತ ಪ್ರಯತ್ನ ಸಾಗಬೇಕು ಎಂದು ಮೋದಿ ಹೇಳಿದ್ದಾರೆ.
ಇಂದಿನ ಸಭೆ ರಾಷ್ಟ್ರವ್ಯಾಪಿ ಲಾಕ್ಡೌನ್ನ ನಿಗದಿತ ಅಂತ್ಯಕ್ಕೆ ಕೇವಲ ಒಂದು ವಾರಗಳ ಮುಂಚೆ ನಡೆದಿದೆ. COVID-19 ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಚ್ 24 ರಂದು ಪ್ರಧಾನಿ 21 ದಿನಗಳ ಲಾಕ್ಡೌನ್ ಘೋಷಿಸಿದ್ದರು. ನಂತರ ಲಾಕ್ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲಾಯಿತು.
ದೇಶದ ಕೋವಿಡ್ -19 ಪರಿಸ್ಥಿತಿ ಕುರಿತು ಪ್ರಧಾನಿ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಇಂತಹ ಎರಡು ಸಂವಾದಗಳನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.