ಡೆಹ್ರಾಡೂನ್: ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳಲ್ಲಿ ಬಾಗಿಲುಗಳನ್ನು ತೆರೆಯಲಾಗಿದೆ. ಈ ಸಂದರ್ಭದಲ್ಲಿ ಅರ್ಚಕರು ಪ್ರಧಾನಿ ನರೇಂದ್ರ ಮೋದಿಯ ಪರವಾಗಿ ಪ್ರಾರ್ಥನೆಗಳನ್ನು ಸಲ್ಲಿಸಿದರು. ಇದರ ಬಳಿಕ ಕೇದಾರನಾಥ ಮತ್ತು ಬದ್ರಿನಾಥ ಅರ್ಚಕರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ.
ಉತ್ತರಾಖಂಡದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಸತ್ಪಾಲ್ ಮಹಾರಾಜ್ ಅವರು ಕೇದಾರನಾಥ ಮತ್ತು ಬದ್ರಿನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಮೊದಲ ಪ್ರಾರ್ಥನೆಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ 2 ದೇಗುಲಗಳಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಮೋದಿಯ ಪರವಾಗಿ ಸಚಿವರು ಪ್ರಾರ್ಥನೆಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ. ಈ ದೇಗುಲಗಳಿಗೆ ಭಕ್ತಾದಿಗಳ ಸಂಖ್ಯೆ ಹೆಚ್ಚಿದ ಪರಿಣಾಮವಾಗಿ ಉತ್ತರಾಖಂಡದ ಆರ್ಥಿಕತೆಯು ಸುಧಾರಣೆಗೊಂಡಿತ್ತು.
“ಪ್ರತಿ ವರ್ಷ ಪ್ರಧಾನಮಂತ್ರಿಗಳು ಕೇದರನಾಥ ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಮತ್ತು ಆಶೀರ್ವಾದವನ್ನು ಪಡೆಯುತ್ತಾರೆ. ಆದರೆ ಈ ಬಾರಿ ಕೊರೋನವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಅವರಿಗೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಕೃತಜ್ಞತೆಯ ಸಂಕೇತವಾಗಿ ಕೇದಾರನಾಥ ಮತ್ತು ಬದರಿನಾಥ ದೇಗುಲಗಳಲ್ಲಿ ಅವರ ಸಲುವಾಗಿ ಪ್ರಾರ್ಥನೆಯನ್ನು ಸಲ್ಲಿಸಿದ್ದೇವೆ” ಎಂದು ಸಚಿವರು ಹೇಳಿದ್ದಾರೆ.
ಲಾಕ್ಡೌನ್ ತೆರವಾದ ಬಳಿಕ ದೆಹಲಿಗೆ ಹೋಗಿ ಪ್ರಸಾದ ಮತ್ತು ಪವಿತ್ರ ತೀರ್ಥವನ್ನು ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡುವುದಾಗಿ ಸಚಿವರು ಹೇಳಿದ್ದಾರೆ.
ಗಂಗೋತ್ರಿ ದೇಗುಲದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ ಪರವಾಗಿ ಮೊದಲ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಅರ್ಚಕರು ಪವಿತ್ರ ಗಂಗೆಯ ನೀರನ್ನು ಅಂಚೆಯ ಮೂಲಕ ಪ್ರಧಾನಿಯವರಿಗೆ ಕಳುಹಿಸಿಕೊಟ್ಟಿದ್ದಾರೆ. ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಮೋದಿಯವರು ಶಕ್ತಿ ವೃದ್ಧಿಯಾಗಲಿ ಎಂದು ಅರ್ಚಕರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರವಾಗಿ ರಾಜ್ಯಕ್ಕೆ ಭೇಟಿ ಕೊಡುತ್ತಿರುವುದರಿಂದ ಉತ್ತರಾಖಂಡದ ಪ್ರವಾಸೋದ್ಯಮವು ಸುಧಾರಣೆಯನ್ನು ಕಂಡಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರುದ್ರ ಮೆಡಿಟೇಶನ್ ಕೇವ್ಗೆ ಭೇಟಿಯನ್ನು ನೀಡಿದ್ದರು. ಅಲ್ಲಿ ಅವರು ತುಸು ಹೊತ್ತು ಧ್ಯಾನ ಮಾಡಿದ್ದರು. ಆ ಬಳಿಕ ಅಲ್ಲಿಗೆ ಆಗಮಿಸುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.