ಲಕ್ನೋ: ಮಹಾರಾಷ್ಟ್ರದ ಪಲ್ಘರದಲ್ಲಿ ಇಬ್ಬರು ಸಾಧುಗಳ ಭೀಕರ ಹತ್ಯೆಯ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಪ್ರದೇಶದಲ್ಲಿ ಇಬ್ಬರು ಅರ್ಚಕರ ಹತ್ಯೆ ನಡೆದಿದೆ. ಉತ್ತರಪ್ರದೇಶದ ಪಗೋನ್ ಗ್ರಾಮದ ದೇವಸ್ಥಾನದ ಸಮೀಪ ಇಬ್ಬರು ಅರ್ಚಕರ ಮೃತದೇಹ ಸೋಮವಾರ ಪತ್ತೆಯಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಬುಲಂದ್ಸರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಪ್ರಕರಣದ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಮತ್ತು ಆದಷ್ಟು ಬೇಗ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.
ಬುಲಂದ್ಸರ್ ಪೊಲೀಸರು ಈಗಾಗಲೇ ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದಾರೆ. ಇಬ್ಬರು ಅರ್ಚಕರನ್ನು ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಮತ್ತು ವರದಿಗಾಗಿ ಕಾಯಲಾಗುತ್ತಿದೆ.
ಸೋಮವಾರ ದೇಗುಲಕ್ಕೆ ಆಗಮಿಸಿದ ವೇಳೆ ಜನರು ಅರ್ಚಕರ ಮೃತದೇಹವನ್ನು ನೋಡಿದ್ದಾರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇಬ್ಬರು ಅರ್ಚಕರನ್ನು 55 ವರ್ಷದ ಸಾಧು ಜಗನ್ದಾಸ್ ಮತ್ತು 35 ವರ್ಷದ ಸೇವ ದಾಸ್ ಎಂದು ಗುರುತಿಸಲಾಗಿದೆ. ಪಗೋನ್ ಗ್ರಾಮದ ನಿವಾಸಿಗಳು ಇವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.