ನವದೆಹಲಿ: ಕೊರೋನಾವೈರಸ್ ಎಂಬ ಮಹಾಮಾರಿ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನೇ ತಲ್ಲಣಗೊಳಿಸುತ್ತಿದೆ. ಮಹಾಮಾರಿಯ ಪ್ರಭಾವದಿಂದಾಗಿ ಗಲ್ಫ್ ದೇಶಗಳಲ್ಲಿ ಇರುವ ಅಪಾರ ಸಂಖ್ಯೆಯ ಭಾರತೀಯರು ಅಸ್ಥಿರಗೊಂಡಿದ್ದಾರೆ. ಅಲ್ಲಿ ಉದ್ಯೋಗವಿಲ್ಲದೆ ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದಾರೆ. ಭಾರತಕ್ಕೆ ವಾಪಾಸ್ಸಾಗಲು ತುದಿಗಾಲಲ್ಲಿ ನಿಂತಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಗಲ್ಫ್ ದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ಕರೆತರುವ ಸವಾಲಿನ ಕಾರ್ಯವನ್ನು ಅನುಷ್ಠಾನಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಇದೇ ಕಾರಣಕ್ಕಾಗಿ ಮೂರು ಯುದ್ಧನೌಕೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.
ಐಎನ್ಎಸ್ ಜಲಶ್ವ, ಮತ್ತು ಇತರ 2 ಇದ್ದ ನೌಕೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
“ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸ್ಥಳಾಂತರ ಯೋಜನೆಯನ್ನು ರೂಪಿಸುತ್ತಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ನೌಕಾದಳವು ಸಾವಿರಾರು ಭಾರತೀಯರನ್ನು ಸ್ಥಳಾಂತರ ಮಾಡುವ ಸಲುವಾಗಿ ಮೂರು ಯುದ್ಧನೌಕೆಗಳನ್ನು ಕಳುಹಿಸಿಕೊಡಲು ಸಿದ್ಧವಾಗಿದೆ” ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿಯವರು ವಿದೇಶದಲ್ಲಿನ ಭಾರತೀಯರ ಸ್ಥಳಾಂತರ ಯೋಜನೆಯ ರೂಪುರೇಷೆಗಳನ್ನು ಪರಿಶೀಲಿಸಿದ್ದಾರೆ. ಬ್ಲೂ ಕಾಲರ್ ಉದ್ಯೋಗಿಗಳು ಎಂದು ಕರೆಯಲ್ಪಡುವ ಶ್ರಮಿಕ ವರ್ಗವು ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿದೆ. ಸರ್ಕಾರದಿಂದ ಹಾರಿಸಲಾಗುವ ವಿಶೇಷ ವಿಮಾನಗಳಲ್ಲಿ ಮೊದಲ ಆದ್ಯತೆಯಾಗಿ ಇವರನ್ನು ಕರೆತರುವ ಯೋಜನೆಯೂ ಇದೆ ಎನ್ನಲಾಗಿದೆ.
ನಂತರದಲ್ಲಿ ವಿದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರಲು ಆದ್ಯತೆಯನ್ನು ಸರ್ಕಾರ ನೀಡಲಿದೆ. ಉಳಿದಂತೆ ಕೆಲಸದ ಕಾರ್ಯದ ನಿಮಿತ್ತ ತೆರಳಿ ಅವರನ್ನು ಕರೆತರುವತ್ತ ಗಮನ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.