ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ, ಬಾಹ್ಯಾಕಾಶ ತಂತ್ರಜ್ಞಾನ ಬಳಕೆ ಮಾಡಿ ಇಲಾಖೆಗೆ ಕಾಯಕಲ್ಪ ಕಲ್ಪಿಸುವ ಕುರಿತಂತೆ ಇಸ್ರೋ ಮುಖ್ಯಸ್ಥ ಕೆ. ಶಿವನ್ ಮತ್ತು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ನಗರದ ಇಸ್ರೋದ ಪ್ರಧಾನ ಕಛೇರಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು.
ರಾಜ್ಯದ ಸಾರಿಗೆ ಸಂಸ್ಥೆಗಳಾದ KSRTC, BMTC, ಈಶಾನ್ಯ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ವನ್ನು ಬಳಸಿ ಇಲಾಖೆಯ ಕಾರ್ಯವೈಖರಿಯ ಗುಣಮಟ್ಟವನ್ನು ಹೆಚ್ಚುಗೊಳಿಸುವ ಸಲುವಾಗಿ ಈ ಮಾತುಕತೆ ನಡೆಸಲಾಗಿದೆ. ಸಂಸ್ಥೆಗಳ ಖರ್ಚು ಕಡಿಮೆ ಮಾಡುವ ಮತ್ತು ಆದಾಯ ಹೇಚ್ಚಿಸುವ ಸಲುವಾಗಿ ಅನುಸರಿಸಬಹುದಾದ ಹೊಸ ಕ್ರಮಗಳ ಬಗ್ಗೆಯೂ ಇವರಿಬ್ಬರೂ ಚರ್ಚೆ ನಡೆಸಿದ್ದಾರೆ.
ಸಾರಿಗೆ ಸಂಸ್ಥೆಯ ಕಾರ್ಯವೈಖರಿಯ ಕ್ಷಮತೆ ಹೆಚ್ಚಳ, ಮಾಹಿತಿ ಸೋರಿಕೆ ತಡೆಗಟ್ಟುವ ಸಲುವಾಗಿಯೂ ಇಸ್ರೋ ಸಂಸ್ಥೆಯಿಂದ ಮಾರ್ಗದರ್ಶನ ನೀಡುವಂತೆ ಸವದಿ ವಿನಂತಿಸಿದ್ದಾರೆ. ಆರ್ಥಿಕ ವ್ಯವಹಾರ ವೃದ್ಧಿಗೆ ಸಂಬಂಧಿಸಿದಂತೆಯೂ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಂಸ್ಥೆ ಸಹಕಾರ ನೀಡುವಂತೆಯೂ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಅಲ್ಲದೆ ಎಲ್ಲಾ ಸಾರಿಗೆ ಸಂಸ್ಥೆಯ ವಾಹನಗಳ ಕಾರ್ಯ ಕ್ಷಮತೆ ಹೆಚ್ಚಿಸಲು ಇಸ್ರೋ ತಂತ್ರಜ್ಞಾನ ಅಭಿವೃದ್ಧಿ ಮಾಡಿಕೊಡುವಂತೆಯೂ ಶಿವನ್ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಶಿವನ್ ಅವರೂ ಒಪ್ಪಿಗೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಬಾಹ್ಯಾಕಾಶ ತಂತ್ರಜ್ಞಾನ ಬಳಸಿಕೊಂಡು ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಇಸ್ರೋ ಅಧ್ಯಕ್ಷರಾದ ಶ್ರೀ ಕೆ.ಶಿವನ್ ಅವರೊಂದಿಗೆ ಮಹತ್ವದ ಸಭೆಯಲ್ಲಿ ಇಂದು ಪಾಲ್ಗೊಂಡು,
ಕಡಿಮೆ ವೆಚ್ಚ, ತ್ವರಿತ ಸೇವೆ ಹಾಗೂ ಸಾರಿಗೆಯ ಅಚ್ಚುಕಟ್ಟು ನಿರ್ವಹಣೆಗೆ ಇಸ್ರೋ ತಂತ್ರಜ್ಞಾನ ಮತ್ತು ಶ್ರೀ.ಕೆ.ಶಿವನ್ ಅವರ ಮಾರ್ಗದರ್ಶನ ಕೋರಿದ್ದೇನೆ pic.twitter.com/uIgYV6OO1H
— ಲಕ್ಷ್ಮಣ್ ಸಂಗಪ್ಪ ಸವದಿ | Laxman Sangappa Savadi (@LaxmanSavadi) April 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.