ಮಂಗಳೂರು: ದೇಶ ಕೋವಿಡ್-19 ನಿಂದಾಗಿ ಕಂಗೆಟ್ಟಿದೆ. ದೇಶದ ಆರ್ಥಿಕ ಸ್ಥಿತಿ ಪಾತಾಳದತ್ತ ಮುಖ ಮಾಡಿದೆ. ಅಗತ್ಯ ವಿಚಾರಗಳಿಗೂ ಆರ್ಥಿಕ ಬರೆ ಹಾಕುವ ಕೆಲಸವನ್ನು ಕೊರೋನಾ ಮಾಡಿದೆ ಎಂದೇ ಹೇಳಬಹುದು. ಕೊರೋನಾ ವಿರುದ್ಧ ಹೋರಾಟಕ್ಕೆ ಸಾರ್ವಜನಿಕ ವಲಯದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳೆರಡೂ ಸಹಕಾರ ಬಯಸಿ, ದೇಣಿಗೆ ನೀಡುವಂತೆಯೂ ಸೂಚಿಸಿತ್ತು. ಇದೀಗ ಕರ್ನಾಟಕದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರಾಜ್ಯ ಸಂಘ ಸಂಸ್ಥೆಗಳು ದೇಣಿಗೆ ನೀಡುವ ಮೂಲಕ ಕೊರೋನಾ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿವೆ.
ಕೆಲವು ರಾಜ್ಯ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ರಾಜ್ಯದ ಸುಮಾರು 47.15 ಕೋಟಿ ರೂ. ಗಳ ದೇಣಿಗೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದಿಂದ 50 ಲಕ್ಷ ರೂ. , ಶಿರಸಿಯ ಎಪಿಎಂಸಿ ವತಿಯಿಂದ50 ಲಕ್ಷ ರೂ., ಕ್ಯಾಂಪ್ಕೋ ವತಿಯಿಂದ 25 ಲಕ್ಷ ರೂ., ಎಟಿಎಸ್ ಇಂಡಿಯಾ ಪ್ರೈ. ಲಿ. ವತಿಯಿಂದ 20 ಲಕ್ಷ, ಶಿರಸಿಯ ತೋಟಗಾರ್ಸ್ ಸಂಸ್ಥೆಯ ವತಿಯಿಂದ 10 ಲಕ್ಷ ರೂ., ಪುತ್ತೂರು ಕೊ- ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ 75,000 ರೂ. ಸೇರಿದಂತೆ ವಿವಿಧ ಸಹಕಾರಿ ಸಂಘಗಳು ಸಹಕಾರಿ ಸಚಿವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹಣವನ್ನು ತಲುಪಿಸಿದ್ದಾರೆ.
ಈ ಸಂದರ್ಭ ಸಹಕಾರಿ ಸಚಿವ ಎಸ್. ಟಿ. ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ, ದ.ಕ.ಜಿ.ಸ. ಸಂಘಗಳ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.