ಬೆಂಗಳೂರು: ಕೊರೋನಾ ವೈರಸ್ನಿಂದಾಗಿ ದೇಶ ಲಾಕ್ಡೌನ್ ಆಗಿದ್ದು, ಈ ಸಂದರ್ಭ ತುರ್ತು ಅವಶ್ಯಕತೆಗಳನ್ನು ಪೂರೈಸುವುದಕ್ಕೂ ಪರದಾಡುತ್ತಿರುವ ಕುಟುಂಬಗಳಿಗೆ ನೆರವಾಗುತ್ತಿರುವ ಬೆಂಗಳೂರಿನಲ್ಲಿರುವ ಅರುಣ್ ಸಿವಾಗ್ ಅವರಿಗೆ ಅಮೆರಿಕಾ ಸಚಿವ ಮೈಕ್ ಪಾಂಪಿಯೋ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಚೆನ್ನೈನ ಯುಎಸ್ ಕನ್ಸುಲೇಟ್ ಮಾಡಿರುವ ಟ್ವೀಟ್ ಅನ್ನು ರಿಟ್ವೀಟ್ ಮಾಡುವ ಮೂಲಕ ಯುವಕನಿಗೆ ಪೊಂಪಿಯೋ ಮೆಚ್ಚುಗೆ ಸೂಚಿಸಿದ್ದಾರೆ. ಗ್ಲೋಬಲ್ ಕಲ್ಚರ್ ಸಂಸ್ಥೆಯ ಸಂಸ್ಥಾಪಕರೂ ಆಗಿರುವ ಅರುಣ್ ಅವರು ರಾಗರಶ್ಮಿ ಫೌಂಡೇಶನ್ ಹಾಗೂ ಸ್ಕೇಡ್ ಫೌಂಡೇಶನ್ನ ಸಹಭಾಗಿತ್ವದಲ್ಲಿ 12 ಸಾವಿರ ಕೆಜಿ ಆಹಾರ, ವೈದ್ಯಕೀಯ ಸೌಲಭ್ಯಗಳನ್ನು ಜನರಿಗೆ ಒದಗಿಸುವ ಕೆಲಸ ಮಾಡಿದ್ದಾರೆ.
ನಗರದ ವಿವಿಧೆಡೆಯಲ್ಲಿ ಆಹಾರ, ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿರು ಕುಟುಂಬಗಳಿಗೆ ಅರುಣ್ ಸಿವಾಗ್ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಈ ಮಾದರಿ ಕಾರ್ಯವನ್ನು ಪಾಂಪಿಯೋ ಶ್ಲಾಘಿಸಿದ್ದಾರೆ. ಅಲ್ಲದೆ ಇವರ ಈ ಕೆಲಸ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
#ExchangeAlumni getting it done in #India. @sivagarun, your humanitarian spirit and service inspires us all. https://t.co/6o6IqWA4MS
— Secretary Pompeo (@SecPompeo) April 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.