ಲಕ್ನೋ: ದೇಶದ ವಿವಿಧ ರಾಜ್ಯಗಳಲ್ಲಿ ಸಿಲುಕಿ ಹಾಕಿಕೊಂಡಿರುವ ತನ್ನ ರಾಜ್ಯದ ವಲಸೆ ಕಾರ್ಮಿಕರನ್ನು ವಾಪಸ್ ಕರೆತರುವ ಕಾರ್ಯವನ್ನು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ಮಾಡುತ್ತಿದೆ. ಹೀಗಾಗಿ ವಲಸಿಗರಿಗೆ ಬೇಕಾದ ಎಲ್ಲಾ ಅಗತ್ಯತೆಗಳನ್ನು ನೀಡುವ ಹಿನ್ನೆಲೆಯಲ್ಲಿ ಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಯೋಗಿ ಸೂಚನೆ ನೀಡಿದ್ದಾರೆ.
ಬೇರೆ ರಾಜ್ಯಗಳಿಂದ ವಾಪಸ್ ಬರುವ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ ಕೇಂದ್ರಗಳನ್ನು, ಆಶ್ರಯ ಕೇಂದ್ರಗಳನ್ನು ಮತ್ತು ಸಮುದಾಯ ಕಿಚನ್ಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ.
ಸುಮಾರು 6 ಲಕ್ಷ ವಲಸಿಗ ಕಾರ್ಮಿಕರು ಉತ್ತರಪ್ರದೇಶಕ್ಕೆ ವಾಪಸ್ ಬರುವ ನಿರೀಕ್ಷೆಯಿದೆ. ಹೀಗಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಲಾಗಿದೆ.
ಬೇರೆ ರಾಜ್ಯಗಳಲ್ಲಿ ಇರುವ ವಲಸೆ ಕಾರ್ಮಿಕರು ಸಂಯಮದಿಂದ ಇರಬೇಕು ಮತ್ತು ಕಾಲ್ನಡಿಗೆಯ ಮೂಲಕ ತಮ್ಮ ತವರನ್ನು ಸೇರುವ ಸಾಹಸವನ್ನು ಮಾಡಬಾರದು ಎಂದು ಯೋಗಿ ಮನವಿ ಮಾಡಿಕೊಂಡಿದ್ದಾರೆ.
“ಇದುವರೆಗೆ ಇದ್ದಂತೆ ತಾಳ್ಮೆಯನ್ನು ಕಾಪಾಡಿ. ಮನಸೆ ಕಾರ್ಮಿಕರು ಸುರಕ್ಷಿತವಾಗಿ ತವರಿಗೆ ಮರಳಬೇಕು ಎನ್ನುವ ನಿಟ್ಟಿನಲ್ಲಿ ಸಂಬಂಧಿತ ರಾಜ್ಯಗಳೊಂದಿಗೆ ಮಾತನಾಡಿ ವಿಸ್ತೃತ ಯೋಜನೆಯನ್ನು ರೂಪಿಸಲಾಗುತ್ತಿದೆ. ಹೀಗಾಗಿ ಎಲ್ಲಿದ್ದೀರೋ ಅಲ್ಲೇ ಇರಿ ಮತ್ತು ಸಂಬಂಧಿತ ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿರಿ. ಕಾಲ್ನಡಿಗೆಯ ಮೂಲಕ ವಾಪಸ್ ಬರುವ ಕಾರ್ಯ ಮಾಡಬೇಡಿ” ಇಂದು ಗುರುವಾರ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.