ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿ ರಸ್ತೆಗಿಳಿದಿದ್ದ ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದರು. ಅಂತಹ ಸೀಝ್ಡ್ ವಾಹನಗಳನ್ನು ಮೇ 1 ರಿಂದಲೇ ವಾರೀಸುದಾರರಿಗೆ ಸರ್ಕಾರದ ಅನುಮತಿಯ ಮೇರೆಗೆ ಬಿಟ್ಟುಕೊಡಲಾಗುವುದು ಎಂದು ನಗರದ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರು ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾಗದಂತೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಜಾರಿಗೊಳಿಸಿದ್ದ ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ರಸ್ತೆಗೆ ಇಳಿಸಿದ್ದ ಸವಾರರಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಬೆಂಗಳೂರು ನಗರದ ಪೊಲೀಸರು ವಾಹನಗಳನ್ನು ಜಪ್ತಿ ಮಾಡಿದ್ದರು. ಲಾಕ್ಡೌನ್ ಮುಗಿಯುವವರೆಗೂ ವಾಹನಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂಬುದಾಗಿಯೂ ಇಲಾಖೆ ಈ ಹಿಂದೆಯೇ ಸ್ಪಷ್ಟಪಡಿಸಿತ್ತು. ಆದರೆ ಮೇ 1 ರಿಂದ ಹಿಡಿದಿಟ್ಟುಕೊಳ್ಳಲಾದ ವಾಹನಗಳನ್ನು ಮತ್ತೆ ಹಿಂದಿರುಗಿಸುವುದಾಗಿ ಭಾಸ್ಕರರಾವ್ ಮಾಹಿತಿ ನೀಡಿದ್ದಾರೆ.
ಇನ್ನು ಈ ವಾಹನಗಳನ್ನು ಕೋರ್ಟ್ ಕಛೇರಿಗಳ ಮೂಲಕವೇ ಬಿಡಿಸಿಕೊಳ್ಳಬೇಕಲ್ಲಾ ಎಂದು ತಲೆ ಕೆಡಿಸಿಕೊಂಡವರಿಗೂ ಇಲಾಖೆ ಕೊಂಚ ರಿಲೀಫ್ ನೀಡಿದ್ದು, ಸರಿಯಾದ ದಾಖಲೆಗಳನ್ನು ತೋರಿಸಿ ನೇರವಾಗಿ ವಾಹನವನ್ನು ಬಿಡಿಸಿಕೊಂಡು ಹೋಗುವಂತೆಯೂ ಸೂಚಿಸಿದ್ದಾರೆ. ಅದಕ್ಕೂ ಮೊದಲು ಎನ್ ಡಿ ಎಂ ಎ ಕಾಯ್ದೆಯನ್ವಯ ಶುಲ್ಕ ಪಾವತಿಸಬೇಕು ಎಂದು ಪೊಲೀಸ್ ಆಯುಕ್ತರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
It’s decided to return the Corona seized vehicles from 1/5/20 onwards. Those seized first will be returned first.The documents will be verified and vehicle returned. This has approval of Hon CM and HM. We are doing the paperwork to ease the process.
— Bhaskar Rao IPS (@deepolice12) April 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.