ನವದೆಹಲಿ: ದೇಶದಾದ್ಯಂತ ಕೊರೋನಾ ಲಾಕ್ಡೌನ್ ಜಾರಿಯಾಗಿ 35 ದಿನಗಳು ಕಳೆದಿದೆ. ಈ ಸಂದರ್ಭದಲ್ಲಿ ಒಂದು ರಾಜ್ಯದ ವಲಸೆ ಕಾರ್ಮಿಕರು ಮತ್ತೊಂದು ರಾಜ್ಯದಲ್ಲಿಯೇ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಮನಗಂಡ ಕೇಂದ್ರ ಸರ್ಕಾರ ವಲಸಿಗರ ಸ್ವರಾಜ್ಯ ಸಂಚಾರಕ್ಕೆ ಅನುಮತಿ ನೀಡಿದ್ದು, ಬಸ್ಸುಗಳ ವ್ಯವಸ್ಥೆ ಮಾಡಿದೆ. ಆದರೆ ಹೆಚ್ಚು ಕಾರ್ಮಿಕರನ್ನು ನಿಯಂತ್ರಣ ನಿಯಮಗಳನ್ನು ಅನುಸರಿಸುವ ಮೂಲಕವೇ ಕರೆದುಕೊಂಡು ಹೋಗುವುದಕ್ಕೆ ಸಾಧ್ಯವಾಗುವಂತೆ ರೈಲು ಸಂಚಾರಕ್ಕಾಗಿ ಕೆಲವು ರಾಜ್ಯಗಳು ಬೇಡಿಕೆಯನ್ನೂ ಇಟ್ಟಿದ್ದವು. ಆದ್ದರಿಂದ ರೈಲುಗಳನ್ನು ಓಡಿಸಲು ಕೇಂದ್ರ ಯೋಚಿಸುತ್ತಿದ್ದು, ಅದಕ್ಕೆ ಪೂರಕವಾದಂತೆ 400 ವಿಶೇಷ ರೈಲುಗಳ ಓಡಾಟಕ್ಕೂ ಸಿದ್ಧತೆ ನಡೆಸಿದೆ.
ಈ ಕುರಿತಂತೆ ಇಲಾಖೆ ಯೋಜನೆಯೊಂದನ್ನು ಸಿದ್ಧಪಡಿಸಿದ್ದು, ಏಕ ಕಾಲಕ್ಕೆ 1000 ಜನರಿಗೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಸಿ ರಹಿತ ರೈಲುಗಳು ಕಾರ್ಮಿಕರನ್ನು ಸಾಗಿಸಲಿವೆ. ಸಾಮಾಜಿಕ ಅಂತರ ಕಾಪಾಡುವುದು ಮತ್ತು ಇತರ ನಿಯಂತ್ರಣ ನಿಯಮಗಳನ್ನು ಅನುಸರಿಸಿಕೊಂಡು ರೈಲು ಸಂಚಾರಕ್ಕೆ ಅವಕಾಶವನ್ನು ಕೋರಿ ರಾಜ್ಯಗಳು ಬೇಡಿಕೆ ಸಲ್ಲಿಸಿವೆ. ಇನ್ನು ಬಸ್ಸಿನಲ್ಲಿ ಎಲ್ಲಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿದರೆ ಕೇವಲ 25 ಜನರು ಮಾತ್ರವೇ ಸಂಚಾರ ಮಾಡುವುದು ಸಾಧ್ಯ. ಈ ನಿಟ್ಟಿನಲ್ಲಿ ಹೆಚ್ಚು ಜನರಿಗೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಸ್ಕ್ರೀನಿಂಗ್, ಸ್ಯಾನಿಟೈಸಿಂಗ್ ಪ್ರಕ್ರಿಯೆಗಳ ಮೂಲಕ ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ.
ಕೇಂದ್ರ ಸರ್ಕಾರ ಪರಿಸ್ಥಿತಿಗಳ ಬಗ್ಗೆ ಅವಲೋಕನ ನಡೆಸಿ ರೈಲು ಪ್ರಯಾಣದ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಕೇಂದ್ರ ಅನುಮತಿಸಿದಲ್ಲಿ ದಿನಕ್ಕೆ 400 ವಿಶೇಷ ರೈಲು ಓಡಾಟ ನಡೆಯಲಿದೆ ಎಂದು ಭಾರತೀಯ ರೈಲ್ವೇ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.