ಬೆಂಗಳೂರು: ಮಹಾಮಾರಿ ಕೊರೋನಾ ವಿರುದ್ಧ ಜೀವ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಕೊರೋನಾ ಯೋಧರು, ಕೋವಿಡ್-19 ಗೆ ತುತ್ತಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಗಳನ್ನು ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಸೋಂಕಿತರ ಆರೋಗ್ಯ ರಕ್ಷಣಾ ಕಾರ್ಯದಲ್ಲಿ ತಮ್ಮ, ತಮ್ಮವರ ಜೀವವನ್ನೂ ಲೆಕ್ಕಿಸದೇ ಕೆಲಸ ಮಾಡುವವರ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪೊಲೀಸರನ್ನು, ಪೌರ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
Karnataka Chief Minister BS Yediyurappa has announced Rs 30 lakhs compensation for Anganwadi workers & assistants, civil workers, and police personnel who die after getting infected by #COVID19 while carrying out their duties: State Chief Minister’s Office (File pic) pic.twitter.com/Z60i7RBdtC
— ANI (@ANI) April 30, 2020
ಕೊರೋನಾ ಸೋಂಕಿನಿಂದ ದೇಶ ಲಾಕ್ಡೌನ್ ಆಗಿದೆ. ಆರೋಗ್ಯ ಕಾರ್ಯಕರ್ತರು, ಪೊಲೀಸರು ಮಾತ್ರ ನೇರಾ ನೇರ ಕಣ್ಣಿಗೆ ಕಾಣದ ವೈರಸ್ ನಿಂದ ಸಮಾಜವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದು, ಅವರ ಕ್ಷೇಮವನ್ನೂ ಸರ್ಕಾರ ಬಯಸುತ್ತಿದೆ ಎಂಬುದಕ್ಕೆ ಬಿಎಸ್ವೈ ಅವರ ಈ ನಿರ್ಧಾರ ಸಾಕ್ಷಿಯಾಗಿದೆ. ಆ ಮೂಲಕ ಕೊರೋನಾ ವಾರಿಯರ್ಸ್ ಕುಟುಂಬಕ್ಕೆ ಮತ್ತು ರಿಯಲ್ ವಾರಿಯರ್ಸ್ಗೆ ಧೈರ್ಯ ತುಂಬುವ ಕೆಲಸವನ್ನೂ ಸರ್ಕಾರ ಮಾಡಿದೆ.
ಇನ್ನು ಈ ವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557 ಕ್ಕೆ ಏರಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ. 223 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.