ನವದೆಹಲಿ: ಪ್ರಸ್ತುತ ದೇಶವ್ಯಾಪಿಯಾಗಿ ಅನುಷ್ಠಾನದಲ್ಲಿರುವ ಲಾಕ್ಡೌನ್ ಮೇ 3 ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಸಚಿವರೊಂದಿಗೆ ಚರ್ಚೆಯನ್ನು ನಡೆಸಿದ್ದಾರೆ.
ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೊಯಲ್, ಸಂಪುಟ ಕಾರ್ಯದರ್ಶಿ ರಾಜೀವ ಗೌಬಾ ಮುಂತಾದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ರೈಲು ಮತ್ತು ವಿಮಾನಗಳ ಕಾರ್ಯಾಚರಣೆಯನ್ನು ಪುನರಾರಂಭಗೊಳಿಸುವುದು ಈ ಸಭೆಯ ಮುಖ್ಯ ಅಜೆಂಡಾ ಆಗಿತ್ತು ಎಂದು ಹೇಳಲಾಗಿದೆ.
ಸೋಮವಾರದಿಂದ ಹಲವಾರು ಜಿಲ್ಲೆಗಳಲ್ಲಿ ವಿನಾಯಿತಿ ಇರಲಿದೆ ಎಂಬ ಬಗ್ಗೆ ಗೃಹ ಸಚಿವಾಲಯವು ಸುಳಿವನ್ನು ನೀಡಿದೆ. ಆದರೆ ರೆಡ್ ಝೋನ್ ಏರಿಯಾಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮುಂದುವರೆಯಲಿದೆ.
ಬುಧವಾರ ಸರ್ಕಾರವು ಬೇರೆಬೇರೆ ಸ್ಥಳಗಳಲ್ಲಿ ಸಿಲುಕಿ ಹಾಕಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ತವರಿಗೆ ಮರಳಲು ಅವಕಾಶ ಕಲ್ಪಿಸಿಕೊಟ್ಟಿದೆ ಕೊಟ್ಟಿದೆ. ಇಂದು ತೆಲಂಗಾಣದಿಂದ ಜಾರ್ಖಂಡ್ಗೆ ವಿಶೇಷ ರೈಲನ್ನು ಓಡಿಸಲಾಗಿದೆ.
15 ದಿನಗಳಲ್ಲಿ ದೇಶದ ಕೊರೋನಾವೈರಸ್ ಹಾಟ್ಸ್ಪಾಟ್ಗಳ ಅಥವಾ ರೆಡ್ ಝೋನ್ ಏರಿಯಾಗಳ ಸಂಖ್ಯೆ ಶೇಕಡ 23 ರಷ್ಟು ಕಡಿಮೆಯಾಗಿದೆ ಎಂದು ಸರ್ಕಾರ ಹೇಳಿದೆ. ಏಪ್ರಿಲ್ 15ರಂದು 170 ಸಂಖ್ಯೆ ಹಾಟ್ ಸ್ಪಾಟ್ ಗಳ ಸಂಖ್ಯೆ ಎ.30ಕ್ಕೆ 130ಕ್ಕೆ ಇಳಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.