ಲಕ್ನೋ : ವಲಸೆ ಕಾರ್ಮಿಕರಿಗೆ ಎರಡನೇ ಹಂತದ ಪಡಿತರ ವಿತರಣೆಯನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಪ್ರಾರಂಭಿಸಿದ್ದು, 300 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯದ 30 ಲಕ್ಷ ಕಾರ್ಮಿಕರನ್ನು ಇದು ಒಳಗೊಳ್ಳಲಿದೆ.
ಮುಖ್ಯಮಂತ್ರಿ ಯೋಗಿ ಅವರು, ಮೇ ದಿನದಂದು 18 ಕೋಟಿ ಕಾರ್ಮಿಕರಿಗಾಗಿ ಉತ್ತರ ಪ್ರದೇಶದಲ್ಲಿ ‘ಒನ್ ನೇಷನ್-ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಪ್ರಾರಂಭಿಸಿದ್ದಾರೆ.
ಇದರ ಅಡಿಯಲ್ಲಿ, ಉತ್ತರ ಪ್ರದೇಶಕ್ಕೆ ಮರಳಿದ ಕಾರ್ಮಿಕರು ಇತರ ರಾಜ್ಯಗಳ ರೇಷನ್ ಕಾರ್ಡ್ ಹೊಂದಿದ್ದರೂ ಕೂಡ ಪಡಿತರವನ್ನು ಪಡೆಯಲಿದ್ದಾರೆ. ಪಡಿತರ ಚೀಟಿ ಇಲ್ಲದವರಿಗೆ ಆಹಾರ ಪ್ಯಾಕೆಟ್ಗಳು ಸಿಗುತ್ತವೆ.
ವೀಡಿಯೊ ಸಂದೇಶದಲ್ಲಿ ಮುಖ್ಯಮಂತ್ರಿಗಳು, “ಸಾಕಷ್ಟು ಆಹಾರ ಧಾನ್ಯಗಳನ್ನು ಹೊಂದಿದ್ದೇವೆ ಮತ್ತು ಯಾರನ್ನೂ ಹಸಿವಿನಿಂದ ಇರಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.
‘मई दिवस’ पर… pic.twitter.com/okoEO6nsQG
— Yogi Adityanath (@myogiadityanath) May 1, 2020
ಆದಿತ್ಯನಾಥ್ ಅವರು ಶುಕ್ರವಾರ ಸಂಜೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಮಿಕರೊಂದಿಗೆ ಸಂವಹನ ನಡೆಸಿದ್ದಾರೆ.
ಸರ್ಕಾರದ ವಕ್ತಾರರ ಪ್ರಕಾರ, ಪ್ರತಿ ಕಾರ್ಮಿಕರಿಗೆ 1,000 ರೂ ನೀಡಲು ರಾಜ್ಯ ಸರ್ಕಾರ ಈಗಾಗಲೇ 18 ಕೋಟಿ ರೂ.ಬಿಡುಗಡೆ ಮಾಡಿದೆ.
ಇತರ ರಾಜ್ಯಗಳಲ್ಲಿ ಸಿಲುಕಿರುವ ಉತ್ತರ ಪ್ರದೇಶದ ಎಲ್ಲ ಕಾರ್ಮಿಕರನ್ನು ಹಂತ ಹಂತವಾಗಿ ಮರಳಿ ಕರೆತರಲಾಗುವುದು ಮತ್ತು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆ ಮೂಲಕ ಅವರು ತಮ್ಮ ತವರು ಜಿಲ್ಲೆಗಳಲ್ಲಿ ಉದ್ಯೋಗ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.