ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಸಂಕಷ್ಟದಲ್ಲಿರುವ ನಮ್ಮ ದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಕ್ರಮೇಣ ಪುನರಾರಂಭಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ವಿದ್ಯುತ್ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದ್ದಾರೆ.
ವಿದ್ಯುತ್ ಒಪ್ಪಂದಗಳ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಮತ್ತು ವಿದ್ಯುತ್ ವಲಯದಲ್ಲಿ ಸುಸ್ಥಿರತೆಯನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುವಂತೆ ನರೇಂದ್ರ ಮೋದಿ ಅವರು ಶುಕ್ರವಾರ ವಿದ್ಯುತ್ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದ್ದಾರೆ.
ಈ ಬಗೆಗಿನ ಸಭೆಯಲ್ಲಿ, ವಿದ್ಯುತ್ ವಲಯದ ಮೇಲೆ ಸಾಂಕ್ರಾಮಿಕ ಪ್ರಭಾವದ ಬಗ್ಗೆ ಚರ್ಚೆ ನಡೆಸಲಾಯಿತು.
ಸರ್ಕಾರದ ಹೇಳಿಕೆಯ ಪ್ರಕಾರ, ಸುಂಕಗಳ ತರ್ಕಬದ್ಧಗೊಳಿಸುವಿಕೆ, ಸಬ್ಸಿಡಿಗಳನ್ನು ಸಕಾಲಿಕವಾಗಿ ಬಿಡುಗಡೆ ಮಾಡುವುದು ಮತ್ತು ಸುಧಾರಿತ ಆಡಳಿತ ಸೇರಿದಂತೆ ಡಿಸ್ಕೋಮ್ಗಳ ಕಾರ್ಯಸಾಧ್ಯತೆಯನ್ನು ಸುಧಾರಿಸಲು ಪ್ರಧಾನಿ ಮತ್ತಷ್ಟು ಸುಧಾರಣೆಗಳನ್ನು ತರುವಂತೆ ಸಚಿವಾಲಯಕ್ಕೆ ಕೋರಿದ್ದಾರೆ.
ಈ ಕೆಲವು ಸಮಸ್ಯೆಗಳನ್ನು 2020ರ ವಿದ್ಯುತ್ ಕಾಯ್ದೆಯ ಮೂಲಕ ಪರಿಹರಿಸಲಾಗುತ್ತಿದ್ದು, ಇದರ ಕರಡನ್ನು ಇತರ ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.