ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡುವ ಸಲುವಾಗಿ ಭಾರತವು ಕುವೈಟ್ ರಾಷ್ಟ್ರಕ್ಕೆ 15 ಜನ ವೈದ್ಯರುಗಳ ತಂಡವನ್ನು ಕಳುಹಿಸಿಕೊಟ್ಟಿದೆ ಮತ್ತು ಔಷಧಿಗಳ ಪೂರೈಕೆ ಮಾಡಿದೆ. ಇದಕ್ಕಾಗಿ ಕುವೈಟ್ ಭಾರತಕ್ಕೆ ಕೃತಜ್ಞತೆಯನ್ನು ಅರ್ಪಣೆ ಮಾಡಿದೆ.
ಕುವೈಟ್ನ ಭಾರತ ರಾಯಭಾರಿ ಜಸೇಮ್ ಅಲ್ ನಜೆಂ ಅವರು ಭಾರತ ಸರ್ಕಾರಕ್ಕೆ ಕೃತಜ್ಞತೆಯನ್ನು ಅರ್ಪಣೆ ಮಾಡಿದ್ದಾರೆ. ಉಭಯ ದೇಶಗಳು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಅತ್ಯಂತ ಯಶಸ್ವಿಯಾಗಿ ಸಹಕಾರವನ್ನು ಹೊಂದಿವೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡ ಬಳಿಕ ಭಾರತದಲ್ಲಿ ಸಿಲುಕಿ ಹಾಕಿಕೊಂಡಿದ್ದ ಜನರನ್ನು ಸ್ಥಳಾಂತರಿಸಲು ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಇತ್ತೀಚಿಗಷ್ಟೇ ಭಾರತವು ಕುವೈಟ್ಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ವೈದ್ಯಕೀಯ ನೆರವನ್ನು ನೀಡುವ ಸಲುವಾಗಿ 15 ಸದಸ್ಯರ ವೈದ್ಯರ ತಂಡವನ್ನು ಕಳುಹಿಸಿಕೊಟ್ಟಿತ್ತು. ಮಾತ್ರವಲ್ಲದೆ ವೈದ್ಯರುಗಳಿಗೆ ತರಬೇತಿಯನ್ನು ಕೂಡ ಭಾರತ ನೀಡುತ್ತಿದೆ.
ಕುವೈಟ್ ಪ್ರಧಾನಿ ಅಲ್ ಖಲೀದ್ ಅಲ್-ಸಬಹ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ನೆರವಿಗಾಗಿ ಮನವಿ ಮಾಡಿಕೊಂಡಿದ್ದರು. ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಕೂಡ ಕುವೈಟ್ ವಿದೇಶಾಂಗ ಸಚಿವರೊಂದಿಗೆ, ಉಭಯ ದೇಶಗಳ ಸಹಕಾರವನ್ನು ವೃದ್ಧಿಸುವ ಬಗ್ಗೆ ಮಾತುಕತೆಯನ್ನು ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.