ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ದೇಶದ ಶಿಕ್ಷಣ ವಲಯದಲ್ಲೂ ಅಸ್ಥಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಸಭೆಯನ್ನು ನಡೆಸಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ, ಎನ್ಇಪಿಗಳ ಬಗ್ಗೆ ತಜ್ಞರೊಂದಿಗೆ ಮೋದಿಯವರು ಚರ್ಚೆ ನಡೆಸಿದ್ದಾರೆ. ಭಾರತವನ್ನು ಜಾಗತಿಕ ಜ್ಞಾನದ ಸೂಪರ್ ಪವರ್ ಆಗಿ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳು, ಶಾಲೆಗಳು ಮತ್ತು ಕಾಲೇಜುಗಳು ಶಿಕ್ಷಣ ವಲಯದಲ್ಲಿ ತಂತ್ರಜ್ಞಾನವನ್ನು ಬಳಸಲು ಹೆಚ್ಚಿನ ಒಲವನ್ನು ತೋರಿಸುತ್ತಿವೆ. ಸಭೆಯಲ್ಲಿ ಕಲಿಕೆಯನ್ನು ಉತ್ತೇಜಿಸಲು ತಂತ್ರಜ್ಞಾನದ ಬಳಕೆ, ಆನ್ಲೈನ್ ತರಗತಿಗಳು, ಶಿಕ್ಷಣ ಪೋರ್ಟಲ್ಗಳು, ಶಿಕ್ಷಣ ವಾಹಿನಿಗಳ ಮೂಲಕ ತರಗತಿಗೆ ಅನುಗುಣವಾದ ಪ್ರಸಾರ ಮುಂತಾದವುಗಳ ಬಗ್ಗೆಯೂ ಚರ್ಚೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಆನ್ಲೈನ್ ತರಗತಿಗಳು, ಶಿಕ್ಷಣ ಪೋರ್ಟಲ್ಗಳು ಮತ್ತು ವಿವಿಧ ಟಿವಿ ಚಾನೆಲ್ ಮತ್ತು ರೇಡಿಯೋ ಚಾನೆಲ್ಗಳ ಮೂಲಕ ತರಗತಿಗಳಿಗೆ ಅನುಗುಣವಾದ ಪ್ರಸಾರಕ್ಕೆ ಹೆಚ್ಚಿನ ಉತ್ತೇಜನವನ್ನು ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇದೀಗ ಲೋಕದ ಎರಡು ವಾರಗಳ ಕಾಲ ವಿಸ್ತರಣೆಯಾಗಿದೆ. ಹೀಗಾಗಿ ಶಿಕ್ಷಣ ಸಚಿವಾಲಯವು ಕಲಿಕೆಯನ್ನು ನಿರಂತರವಾಗಿರುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೀಗಾಗಿ ಅತ್ಯಂತ ವೈವಿಧ್ಯಮಯ ಜ್ಞಾನ ಸಮಾಜ ವಾಗುವ ನಿಟ್ಟಿನಲ್ಲಿ ಉನ್ನತ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವ ಶೈಕ್ಷಣಿಕ ಸುಧಾರಣೆಗಳನ್ನು ತರಬೇಕು ಎಂಬ ಇಂಗಿತವನ್ನು ಮೋದಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.