ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾದ ಲಾಕ್ಡೌನ್ನ ಮೂರನೇ ಹಂತ ಇಂದಿನಿಂದ ಆರಂಭಗೊಂಡಿದೆ. ಆದರೆ ಈ ಬಾರಿ ಹಲವಾರು ವಿನಾಯಿತಿಗಳನ್ನು ಜನರಿಗೆ ನೀಡಲಾಗಿದೆ.
ಕೊರೋನಾವೈರಸ್ ಸೋಂಕಿನ ಪ್ರಮಾಣಕ್ಕೆ ಅನುಗುಣವಾಗಿ ದೇಶದ ಜಿಲ್ಲೆಗಳನ್ನು ಹಸಿರು ವಲಯ, ಕೇಸರಿ ವಲಯ ಮತ್ತು ಕೆಂಪು ವಲಯ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಹಸಿರು ವಲಯದಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿ ಇರಲಿದೆ. ಕನಿಷ್ಠ ನಿರ್ಬಂಧಗಳನ್ನು ಮಾತ್ರ ಇಲ್ಲಿ ವಿಧಿಸಲಾಗಿದೆ. ಕೇಸರಿ ವಲಯದಲ್ಲಿ ಹಲವು ನಿರ್ಬಂಧಗಳನ್ನು ಬಗ್ಗೆ ಕೆಲವೊಂದು ವಿನಾಯತಿಗಳನ್ನು ನೀಡಲಾಗಿದೆ. ಇನ್ನು ಕೆಂಪು ವಲಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಮುಂದುವರೆಯಲಿದೆ.
ಈಗಾಗಲೇ ದೇಶದ ಹಲವಾರು ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ವೈನ್ ಶಾಪ್ ಮಾತ್ರ ತೆರೆಯಲಿದೆ ಬಾರ್ ಮತ್ತು ರೆಸ್ಟೋರೆಂಟ್ಗಳು ಎಂದಿನಂತೆ ಮುಚ್ಚಲಿವೆ. ಹಸಿರು ಮತ್ತು ಕೇಸರಿ ವಲಯದಲ್ಲಿ ಕಚೇರಿಗಳನ್ನು ಕನಿಷ್ಠ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿ ಕೊಡಲಾಗಿದೆ. ಏಕಾಂಗಿಯಾಗಿರುವ ಅಂಗಡಿಗಳನ್ನು ತೆರೆಯಬಹುದು. ಕ್ಷೌರದ ಅಂಗಡಿ, ಬಟ್ಟೆ ಅಂಗಡಿ, ಬ್ಯೂಟಿ ಪಾರ್ಲರ್ ಮುಂತಾದ ಅಂಗಡಿಗಳಿಗೆ ತೆರೆಯಲು ಅವಕಾಶವಿಲ್ಲ.
ಮಾರ್ಚ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವ್ಯಾಪಿಯಾಗಿ ಲಾಕ್ಡೌನ್ ಅನ್ನು ಘೋಷಣೆ ಮಾಡಿದ್ದರು. ಏಪ್ರಿಲ್ 14 ರಂದು ಲಾಕ್ಡೌನ್ ಅನ್ನು ಮತ್ತೆ ಮೇ 4 ರವರೆಗೆ ವಿಸ್ತರಿಸಲಾಯಿತು. ಇದೀಗ ಮೇ 3 ರ ಬಳಿಕ ಮೂರನೇ ಹಂತದ ಲಾಕ್ಡೌನ್ ಅನುಷ್ಠಾನಕ್ಕೆ ಬಂದಿದೆ. ಆದರೆ ಕೆಲವೊಂದು ವಿನಾಯತಿಗಳನ್ನು ನೀಡಿರುವುದರಿಂದ ಜನಸಾಮಾನ್ಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ. ಆದರೆ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜನರು ಸ್ವಯಂ ನಿರ್ಬಂಧಗಳನ್ನು ವಿಧಿಸುವುದು ಅತ್ಯುತ್ತಮ ಮಾರ್ಗವಾಗಿದೆ. ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.