ಶಿವಮೊಗ್ಗ: ಕೊರೋನಾ ಸಂಕಷ್ಟದಿಂದ ತೊಂದರೆಯನ್ನು ಅನುಭವಿಸುತ್ತಿರುವ ರೈತರಿಗೆ ಕೊರೋನಾ ಕುರಿತು ಅರಿವು ಮೂಡಿಸುವ ಮತ್ತು ಆರೋಗ್ಯ ಕಾಳಜಿ ಮೂಡಿಸುವ ಸಲುವಾಗಿ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವಿವಿಯ ವಿಜ್ಞಾನ ಕೇಂದ್ರದಲ್ಲಿ ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ. ಈ ಸಹಾಯವಾಣಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳುವಂತೆ ಸಂಸ್ಥೆ ಕೃಷಿಕರಿಗೆ ಮಾಹಿತಿ ನೀಡಿದೆ.
ಈ ಸಹಾಯವಾಣಿಯಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತದೆ. ರೈತರ ಸಮಸ್ಯೆಗಳಿಗೆ ಈ ಸಹಾಯವಾಣಿಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಕ್ಷೇತ್ರದ ತಜ್ಞರು, ವಿವಿಧ ಸಂಸ್ಥೆಗಳ, ಇಲಾಖೆಗಳ ಸಹಕಾರದೊಂದಿಗೆ ಮಾಹಿತಿ ನೀಡಲಿರುವುದಾಗಿಯೂ ಸಂಸ್ಥೆ ತಿಳಿಸಿದೆ. ಅಲ್ಲದೆ ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಬಗೆಗೂ ಮಾಹಿತಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ದ.ಕ. ಕೊಡಗು , ಚಿಕ್ಕಮಗಳೂರು ಗಳಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಿರುವುದಾಗಿ ವಿವಿ ತಿಳಿಸಿದ್ದು, ರೈತರು ತಮ್ಮ ಸಮಸ್ಯೆ, ಆರೋಗ್ಯ, ಕೃಷಿ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸುವಂತೆ ತಿಳಿಸಿದ್ದಾರೆ.
ಸಹಾಯವಾಣಿ ಸಂಖ್ಯೆಗಳು ಇಂತಿವೆ. 9480838967, 9480838976, 8277932600, 9448999216, 08182-267017 ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಕೃಷಿಕರು ಪರಿಹಾರ ಕಂಡುಕೊಳ್ಳುವಂತೆ ವಿವಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.