ನವದೆಹಲಿ: ಇಡೀ ಜಗತ್ತು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುತ್ತಿದ್ದರೆ, ಕೆಲವು ಜನರು ಇನ್ನೊಂದು ಬಗೆಯ ವೈರಸ್ ಹರಡುವುದರಲ್ಲಿ ನಿರತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆ ಮತ್ತು ನಕಲಿ ಸುದ್ದಿ ಈ ವೈರಸ್ ಆಗಿದೆ ಎಂದಿದ್ದಾರೆ. ಯಾವುದೇ ದೇಶವನ್ನು ಉಲ್ಲೇಖಿಸದೆ ಅವರು ಈ ಆರೋಪವನ್ನು ಮಾಡಿದ್ದಾರೆ.
“ಜಗತ್ತು ಕೋವಿಡ್-19 ವಿರುದ್ಧ ಹೋರಾಟವನ್ನು ನಡೆಸುತ್ತಿದ್ದರೆ, ಕೆಲವರು ಭಯೋತ್ಪಾದನೆ, ನಕಲಿ ಸುದ್ದಿ ಮತ್ತು ವಿಜೃಂಭಿಸಲ್ಪಟ್ಟ ವಿಡಿಯೋಗಳಂತಹ ಮಾರಣಾಂತಿಕ ವೈರಸ್ಗಳನ್ನು ಹರಿಬಿಟ್ಟು ಸಮುದಾಯಗಳನ್ನು ಮತ್ತು ದೇಶಗಳನ್ನು ಒಡೆಯುತ್ತಿದ್ದಾರೆ” ಎಂದು ಮೋದಿ ಅಲಿಪ್ತ ಚಳುವಳಿಯ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ.
“ಪ್ರಜಾಪ್ರಭುತ್ವ, ಶಿಸ್ತು ಮತ್ತು ನಿರ್ಣಾಯಕತೆಗಳ ಮೂಲಕ ಭಾರತವು ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ಹತ್ತಿಕ್ಕಲು ಸ್ವಪ್ರಯತ್ನಗಳನ್ನು ನಡೆಸುತ್ತಿದೆ” ಎಂದಿದ್ದಾರೆ.
“ಈ ಹೋರಾಟದಲ್ಲಿ ನಾವು ಪ್ರಾಮಾಣಿಕ ಜನ ಚಳುವಳಿಯನ್ನು ಸೃಷ್ಟಿಸಲು ಪ್ರಜಾಪ್ರಭುತ್ವ, ಶಿಸ್ತು ಮತ್ತು ನಾಯಕತೆಗಳು ಒಟ್ಟುಗೂಡಬಲ್ಲದು ಎಂಬುವುದನ್ನು ತೋರಿಸಿಕೊಟ್ಟಿದ್ದೇವೆ. ಭಾರತದ ನಾಗರಿಕತೆಯು ಇಡೀ ಜಗತ್ತನ್ನು ಒಂದು ಕುಟುಂಬವೆಂದು ಭಾವಿಸುತ್ತದೆ. ನಾವು ನಮ್ಮ ನಾಗರಿಕರ ಬಗ್ಗೆ ಕಾಳಜಿ ವಹಿಸಿದಷ್ಟೇ ಇತರ ರಾಷ್ಟ್ರಗಳಿಗೂ ಸಹಾಯಹಸ್ತವನ್ನು ನೀಡಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.