ನವದೆಹಲಿ: ಕೊರೋನಾ ಸಂಕಷ್ಟದಿಂದ ಜನರನ್ನು ಪಾರು ಮಾಡಲು ಕೇಂದ್ರ ಸರ್ಕಾರ ಈ ವರೆಗೆ ಎಲ್ಲಾ ರಾಜ್ಯಗಳಿಗೆ ವಿತರಿಸಿದ ಕೋವಿಡ್ -19 ಪರಿಹಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಫಲಾನುಭವಿಗಳಿಗೆ ವಿತರಿಸಲಾದ ಹಣ, ಆಹಾರ ವಸ್ತುಗಳ ಮೌಲ್ಯ, ವಲಸೆ ಕಾರ್ಮಿಕರಿಗೆ ವಿತರಿಸಲಾದ ವಸ್ತುಗಳ ಕುರಿತಾದಂತೆಯೂ ಕೇಂದ್ರ ಮಾಹಿತಿ ನೀಡಿದೆ. ಈ ವರದಿಯ ಪ್ರಕಾರ ಈ ವರೆಗೆ 2.7 ದಶಲಕ್ಷ ಟನ್ಗಳಷ್ಟು ಆಹಾರ ವಸ್ತುಗಳು, 1,87,000 ಟನ್ ದ್ವಿದಳ ಧಾನ್ಯ, 45 ದಶಲಕ್ಷ ಸಿಲಿಂಡರ್ ಗಳನ್ನು ಒಟ್ಟು 627 ದಶಲಕ್ಷ ಜನರಿಗೆ ಪರಿಹಾರವಾಗಿ ನೀಡಲಾಗಿದೆ ಎಂದು ತಿಳಿಸಲಾಗಿದೆ.
ಪ್ರಸ್ತುತ ದೇಶದಲ್ಲಿ 42,533 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 11,707 ರೋಗಿಗಳನ್ನು ಗುಣಪಡಿಸಲಾಗಿದೆ. 1373 ಮಂದಿ ಸೋಂಕು ತಗುಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮೆ 3 ರ ವರೆಗೆ ಭಾರತದಲ್ಲಿ 3.2% ಮರಣ ಸಂಭವಿಸಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 12 ದಿನಗಳಲ್ಲಿ ಕೊರೋನಾ ಹೋರಾಟದಲ್ಲಿ ಮರಣಕ್ಕಿಂತ ಚೇತರಿಕೆ ಕಂಡ ರೋಗಿಗಳ ಪ್ರಮಾಣವೇ ಹೆಚ್ಚಾಗಿದೆ ಎಂದು ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಇನ್ನು ದೇಶದೆಲ್ಲೆಡೆ ಮೂರನೇ ಹಂತದ ಲಾಕ್ಡೌನ್ ನಿಯಮ ಜಾರಿಗೊಳಿಸಿದ್ದು, ರೆಡ್ ಝೋನ್, ಆರೆಂಜ್ ಝೋನ್, ಎಲ್ಲೋ ಝೋನ್ ಹಾಗೂ ಗ್ರೀನ್ ಝೋನ್ ಗಳಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿನಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ. ಅಲ್ಲದೆ ಸಾರ್ವಜನಿಕರು, ಸಂಸ್ಥೆಗಳು ತೆಗೆದುಕೊಳ್ಳಲೇಬೇಕಾದ ಎಚ್ಚರಿಕಾ ಕ್ರಮಗಳ ಬಗ್ಗೆಯೂ ಕೇಂದ್ರ ಮಾಹಿತಿ ನೀಡಿದ್ದು, ಕೊರೋನಾ ವಿರುದ್ಧ ಸಮರ್ಥ ಹೋರಾಟ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.