ಶಿವಮೊಗ್ಗ: ಅಂತರ್ಜಲ ಹೆಚ್ಚಿಸುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ. ಆ ಮೂಲಕ ನಮಗೆ ಬದುಕಲು ಬೇಕಾದ ಅಗತ್ಯತೆಗಳನ್ನು ಪೂರೈಸುವ ಭೂಮಿ ತಾಯಿಯ ಸೇವೆ ಮಾಡುವ ಮೂಲಕ ಸಾರ್ಥಕ ಜೀವನ ನಡೆಸುವತ್ತ ಹೆಜ್ಜೆ ಇಡೋಣ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಅವರು ಶಿವಮೊಗ್ಗದ ಸೂಗೂರಿನ ಕ್ಯಾತಿನಕೊಪ್ಪದಲ್ಲಿ ಅಂತರ್ಜಲ ಚೇತನ ಯೋಜನೆಗೆ ಚಾಲನೆ ನೀಡಿ, ಮಾನವನಿಗೆ ಬೇಕಾಗಿದ್ದೆಲ್ಲವನ್ನೂ ಪ್ರಕೃತಿ ನೀಡಿದೆ. ಆದರೆ ಮನುಷ್ಯ ಪ್ರಕೃತಿಗೆ ಉಪಕಾರ ಎಸಗಿರುವುದಕ್ಕಿಂತ ಹೆಚ್ಚು ಅಪಾಯವನ್ನೇ ತಂದೊಡ್ಡಿದ್ದಾನೆ. ತನ್ನ ಹೊಣೆಗೇಡಿತನದಿಂದಲೇ ಅಪಾಯಗಳನ್ನು ಆಹ್ವಾನಿಸಿಕೊಂಡಿದ್ದಾನೆ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸದ್ಯದ ಸ್ಥಿತಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಆದರೆ ನಾವೆಲ್ಲರೂ ಅಂತರ್ಜಲ ಬಸಿಯುವುದಕ್ಕೆ ತೋರುವ ಉತ್ಸಾಹವನ್ನು ಅಂತರ್ಜಲ ವೃದ್ಧಿಗೆ ಬೇಕಾದ ಕ್ರಮಗಳತ್ತ ತೋರುತ್ತಿಲ್ಲ. ಇದು ಪ್ರಕೃತಿಯ ಋಣ ತೀರಿಸಲು ಸಿಕ್ಕಿರುವ ಅವಕಾಶ ಇದಾಗಿದ್ದು, ಪ್ರತಿಯೊಬ್ಬರೂ ಅಂತರ್ಜಲ ವೃದ್ಧಿಸುವತ್ತ ಚಿತ್ತ ಹರಿಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಸಾರ್ವಜನಿಕ ರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಮುಂದಿನ ಒಂದು ವರ್ಷದೊಳಗಾಗಿ ಅಂತರ್ಜಲ ಚೇತನ ಯೋಜನೆಯಲ್ಲಿ ಹಾಕಿಕೊಳ್ಳಲಾದ ಕೆಲಸಗಳನ್ನು ಪೂರ್ಣ ಮಾಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ಇನ್ನು ಇದಕ್ಕೆ ಬೇಕಾದ ಸಲಹೆ ಸೂಚನೆಗಳನ್ನು ಯೋಜನೆಯ ಸಹಭಾಗಿತ್ವ ವಹಿಸಿಕೊಂಡ ಆರ್ಟ್ ಆಫ್ ಲಿವಿಂಗ್ನ ತಜ್ಞರು ನೀಡಲಿದ್ದಾರೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೆರವಿನೊಂದಿಗೆ 252 ಕೋಟಿ ರೂ. ಗಳ ಕ್ರಿಯಾ ಯೋಜನೆಡಳನ್ನೂ ಈಗಾಗಲೇ ಸಿದ್ಧಪಡಿಸಲಾಗಿದ್ದು ,ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ. ಪ್ರಾಯೋಗಿಕವಾಗಿ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಇದನ್ನು ಅನುಷ್ಠಾನ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹಂತಹಂತವಾಗಿ ರಾಜ್ಯದೆಲ್ಲೆಡೆ ಇದನ್ನು ಕಾರ್ಯಗತಗೊಳಿಸಲಾಗುವುದಾಗಿಯೂ ಈಶ್ವರಪ್ಪ ತಿಳಿಸಿದ್ದಾರೆ.
ಇಂದು ಶಿವಮೊಗ್ಗದ ಹೊಳಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಅಂತರ್ಜಲ ಚೇತನ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಪ್ರಸನ್ನಕುಮಾರ್, ಅಶೋಕನಾಯ್ಕ ಜಿ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆರ್ಟ್ ಆಫ್ ಲಿವಿಂಗ್ ನಿರ್ದೇಶಕರುಗಳಾದ ನಾಗರಾಜ್ ಗಂಗೊಳ್ಳಿ ಮತ್ತು ರವೀಂದ್ರ ರವರು ಉಪಸ್ಥಿತರಿದ್ದರು. pic.twitter.com/eUASU64rzK
— K S Eshwarappa (@ikseshwarappa) May 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.