ಶ್ರೀನಗರ: ಇಡೀ ಜಗತ್ತು ಕೊರೋನವೈರಸ್ ಮಹಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಆದರೆ ಭಾರತದ ಸಾಂಪ್ರದಾಯಿಕ ಶತ್ರು ರಾಷ್ಟ್ರ ಎಂದು ಎನಿಸಿಕೊಂಡಿರುವ ಪಾಕಿಸ್ಥಾನ ಮಾತ್ರ ನಿರಂತರವಾಗಿ ಭಾರತದ ವಿರುದ್ಧ ಪಿತೂರಿ ನಡೆಸುತ್ತಿದೆ. ಆದರೆ ಭಾರತದ ಹೆಮ್ಮೆಯ ಸೇನೆಯು ಪಾಕಿಸ್ಥಾನದ ಪಿತೂರಿಯನ್ನು ತನ್ನ ಶೌರ್ಯದ ಮೂಲಕ ಮಣ್ಣು ಮುಕ್ಕಿಸುತ್ತಿದೆ.
2020 ರ ಜನವರಿ ತಿಂಗಳಿನಿಂದ ಜಮ್ಮು-ಕಾಶ್ಮೀರದಲ್ಲಿ 27 ಉಗ್ರ ವಿರೋಧ ಕಾರ್ಯಾಚರಣೆಗಳು ನಡೆದಿವೆ. 64 ಮಂದಿ ಉಗ್ರರನ್ನು ಸಂಹಾರ ಮಾಡಲಾಗಿದೆ. ಮಾತ್ರವಲ್ಲದೆ, ಉಗ್ರ ವಿರೋಧಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ 25 ಮಂದಿ ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಐಜಿ ವಿಜಯ್ ಕುಮಾರ್ ಹೇಳಿದ್ದಾರೆ.
ಮೊನ್ನೆಯಷ್ಟೇ ಎನ್ಕೌಂಟರ್ನಿಂದ ಮೃತಪಟ್ಟ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯ್ಕೋನಿಗಾಗಿ ಕಳೆದ ಆರು ತಿಂಗಳಿನಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ನಾಯ್ಕೋನನ್ನು ಬಾಯ್ಗ್ಪೋರಾದಲ್ಲಿ 55 ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸ್ಪೆಷಲ್ ಆಪರೇಷನ್ಸ್ ಗ್ರೂಪ್, ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಸಂಹಾರ ಮಾಡಿವೆ. ಕಳೆದ ವರ್ಷವಷ್ಟೇ ಇವನನ್ನು 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.