ನವದೆಹಲಿ: ಬಸ್ ಹಾಗೂ ಕಾರು ಚಾಲಕರು ಲಾಕ್ಡೌನ್ನಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅರಿವಿದೆ. ಅವುಗಳ ನಿವಾರಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಲಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದಾರೆ. ಕೋವಿಡ್-19 ನಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟಗಳ ಕುರಿತಾಗಿ ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಚರ್ಚೆ ನಡೆಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಸಾರಿಗೆ ಸಂಪರ್ಕ ಕುರಿತಂತೆ ವಾಹನ ಚಾಲಕರನ್ನು ಉದ್ದೇಶಿಸಿ ಬಸ್ ಆಂಡ್ ಕಾರ್ ಆಪರೇಟರ್ಸ್ ಕಾನ್ಫಿಡರೇಶನ್ಸ್ ಜೊತೆಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಈ ಮಾಹಿತಿಯನ್ನು ಗಡ್ಕರಿ ನೀಡಿದ್ದಾರೆ. ವಾಹನಗಳನ್ನು ರಸ್ತೆಗಿಳಿಸುವಾಗ ತೆಗೆದುಕೊಳ್ಳಲೇ ಬೇಕಾದ ಅಗತ್ಯ ಕ್ರಮಗಳು, ಕೊರೋನಾ ವೈರಸ್ ಹರಡದಂತೆ ವಹಿಸಬೇಕಾದ ಎಚ್ಚರಿಕಾ ಕ್ರಮಗಳ ಬಗ್ಗೆಯೂ ಅವರು ತಿಳಿಸಿದ್ದಾರೆ. ಸಾರ್ವಜನಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್, ಮಾಸ್ಕ್ಗಳ ಬಳಕೆಗಳ ಬಗೆಗೂ ಈ ವೇಳೆ ಅವರು ಮಾತನಾಡಿದ್ದಾರೆ. ಅಲ್ಲದೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಶೀಘ್ರ ಆರಂಭಿಸುವುದಾಗಿಯೂ ಅವರು ಹೇಳಿದ್ದಾರೆ.
ಜೊತೆಗೆ ಸದಸ್ಯರ ಕಳವಳಿಗೂ ಈ ವೇಳೆ ಸ್ಪಂದನೆ ನೀಡಿರುವ ಸಚಿವರು, ಸಾರ್ವಜನಿಕ ಸಾರಿಕೆಯಲ್ಲಿ ಲಂಡನ್ ಮಾದರಿಯನ್ನು ಅನುಸರಿಸುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಅಂದರೆ ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕ ಸಾರಿಗೆ ಸೇವೆಗಳನ್ನು ನಡೆಸಲಾಗುತ್ತದೆ. ಇದಕ್ಕೆ ಭಾರತದಲ್ಲಿಯೂ ಉತ್ತೇಜನ ನೀಡಲು ಚಿಂತನೆ ಮಾಡಲಾಗುತ್ತಿದೆ. ಇದು ದೇಶದ ಆರ್ಥಿಕ ವ್ಯವಸ್ಥೆಗೆ ಸಹಾಯ ಮಾಡಲಿರುವುದಾಗಿಯೂ ಅವರು ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರ್ಥಿಕವಾಗಿ ಮತ್ತೆ ದೇಶ ದೃಢವಾಗುವ ನಿಟ್ಟಿನಲ್ಲಿ ಚೀನಾ ತೊರೆಯುತ್ತಿರುವ ವಿದೇಶಿ ಕಂಪನಿಗಳನ್ನು ಭಾರತದಲ್ಲಿ ಕಾರ್ಯ ನಿರ್ವಹಿಸುವಂತೆ ಮಾಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ. ಇದರಿಂದಾಗಿ ಕೊರೋನಾ ಹೊಡೆತದಿಂದ ಭಾರತ ಸುಧಾರಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಗಡ್ಕರಿ ಅಭಿಪ್ರಾಯ ಪಟ್ಟಿದ್ದಾರೆ.
ಕೊರೋನಾ ಸಂಕಷ್ಟದಿಂದ ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸ್ತಬ್ಧವಾಗಿದೆ. ದೇಶಕ್ಕೆ ಅಗತ್ಯವಿರುವ ತುರ್ತು ಸೇವೆಗಳಿಗಷ್ಟೇ ಸದ್ಯ ಸಾರಿಗೆ ಸೇವೆಗಳನ್ನು ಬಳಕೆ ಮಾಡಲಾಗುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಶೀಘ್ರ ಆರಂಭಿಸುವ ಕುರಿತಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದು, ಈ ಕುರಿತಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.