ಬೆಂಗಳೂರು: ದೇಶವೇ ಕೊರೋನಾವೈರಸ್ ಕಾರಣದಿಂದಾಗಿ ಲಾಕ್ಡೌನ್ ಆಗಿದೆ. ಇದರಿಂದಾಗಿ ಆರ್ಥಿಕತೆಯ ಮೇಲೆಯೂ ದುಷ್ಪರಿಣಾಮ ಬೀರಿದೆ. ಇನ್ನು ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿಯೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ಪರಿಸ್ಥಿತಿ ನಿರ್ವಹಣೆಗಾಗಿ ನಿಯಮಗಳಲ್ಲಿ ಕೊಂಚ ಸಡಿಲಿಕೆ ತಂದು ಕೆಲವು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವಂತೆ ಸರ್ಕಾರ ಆದೇಶ ನೀಡಿದೆ. ಜೊತೆಗೆ ತೆರಿಗೆ ಸೋರಿಕೆಯಾಗದಂತೆ ತಡೆಯುವುದಕ್ಕೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಸಂಬಂಧ ಸಿಎಂ ತಮ್ಮ ಗೃಹ ಕಛೇರಿಯಲ್ಲಿ ನಿನ್ನೆ ವಾಣಿಜ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ತೆರಿಗೆ ಸೋರಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ ಸಾಗಾಣಿಕೆಗೆ ನೀಡುವ ಸಮಯಾವಕಾಶ ದುರ್ಬಳಕೆ, ನಕಲಿ ಇ-ಬಿಲ್ಗಳ ಬಳಕೆ ಮೊದಲಾದ ಪ್ರಕರಣಗಳನ್ನು ತಡೆಯುವ ಸಲುವಾಗಿ ಕಟ್ಟುನಿಟ್ಟಾದ ನಿರ್ವಹಣಾ ಕ್ರಮ ಅನುಸರಿಸುವಂತೆ ಸೂಚಿಸಿದರು. ಅಲ್ಲದೆ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿದ್ದು , ಜನರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ವ್ಯಾಪಾರಿಗಳಿಗೆ ಕಿರುಕುಳ ನೀಡದೆ ಅವರಿಗೆ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆಯೂ ಸೂಚಿಸಿದ್ದಾರೆ.
ಕೊರೋನಾದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸೇರಬೇಕಾಗಿದ್ದ ತೆರಿಗೆ ಹಣದಲ್ಲಿಯೂ ಭಾರೀ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ. ಮುಂಬರುವ ದಿನಗಳಲ್ಲಿ ಆರ್ಥಿಕ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆಯೃ ಅಧಿಕಾರಿಗಳಿಗೆ ಬಿಎಸ್ವೈ ಅವರು ಸಲಹೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.