ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲಿನ ಅಡಿಗೆ ಸಿಲುಕಿ 16 ವಲಸೆ ಕಾರ್ಮಿಕರ ಸಾವು ಸಂಭವಿಸಿದೆ. ಈ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
“ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದ ರೈಲು ಅಪಘಾತದಿಂದ ಸಂಭವಿಸಿದ ಪ್ರಾಣಹಾನಿ ಬಗ್ಗೆ ತೀವ್ರವಾಗಿ ದುಃಖಿತವಾಗುತ್ತಿದೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Extremely anguished by the loss of lives due to the rail accident in Aurangabad, Maharashtra. Have spoken to Railway Minister Shri Piyush Goyal and he is closely monitoring the situation. All possible assistance required is being provided.
— Narendra Modi (@narendramodi) May 8, 2020
ಮುಂಜಾನೆ 5.15 ರ ಸುಮಾರಿಗೆ ರೈಲು ಹಳಿಗಳ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ರೈಲು ಹಾದು ಹೋದ ಪರಿಣಾಮ ಪರಿಣಾಮ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಚಾಲಕ ಅವರನ್ನು ಕಂಡು ರೈಲು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ರೈಲ್ವೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಮುಂಬೈನಿಂದ 360 ಕಿ.ಮೀ ದೂರದಲ್ಲಿರುವ ಕರ್ಮದ್ ಬಳಿ ಹಳಿಗಳ ಮೇಲೆ ವಲಸಿಗರು ನಡೆದುಕೊಂಡು ಹೋಗುತ್ತಿದ್ದರು ಮತ್ತು ಅಲ್ಲೇ ನಿದ್ರೆಗೆ ಜಾರಿದ್ದರು.
“ಕೆಲವು ಕಾರ್ಮಿಕರನ್ನು ಟ್ರ್ಯಾಕ್ನಲ್ಲಿ ನೋಡಿದ ಸರಕು ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆದರೆ ಆತನಿಗೆ ರೈಲನ್ನು ನಿಲ್ಲಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ರೈಲು ಪರಭಾನಿ-ಮನ್ಮದ್ ವಿಭಾಗದ ಬದ್ನಾಪುರ ಮತ್ತು ಕರ್ಮದ್ ನಿಲ್ದಾಣಗಳ ನಡುವೆ ಜನರ ಮೇಲೆ ಹಾದು ಹೋಗಿದೆ. ಗಾಯಗೊಂಡವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ.
During early hours today after seeing some labourers on track, loco pilot of goods train tried to stop the train but eventually hit them between Badnapur and Karmad stations in Parbhani-Manmad section
Injureds have been taken to Aurangabad Civil Hospital.
Inquiry has been ordered— Ministry of Railways (@RailMinIndia) May 8, 2020
ರಾಷ್ಟ್ರವ್ಯಾಪಿ ಕೊರೋನವೈರಸ್ ಲಾಕ್ಡೌನ್ ಮತ್ತು ಸಾರ್ವಜನಿಕ ಸಾರಿಗೆಯ ನಿಷೇಧದಿಂದಾಗಿ ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಗಳಿಗೆ ನಡೆದುಕೊಂಡು ಹೋಗುತ್ತಿದ್ದಾರೆ.
ಕಳೆದ ವಾರ, ತುರ್ತು ಕಾರಣಗಳಿಗಾಗಿ ಮನೆಗೆ ಮರಳಬೇಕಾದ ವಲಸಿಗರಿಗೆ “ಶ್ರಮಿಕ್” ವಿಶೇಷ ರೈಲುಗಳನ್ನು ಸರ್ಕಾರ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.